ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರ ಅಮಾನವೀಯ ವರ್ತನೆ ಕುರಿತು ಹಿಂದೂ ಮುಖಂಡ ಅರುಣ್ ಪುತ್ತಿಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾರು ನಮ್ಮ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೋ ಅವರನ್ನು ಅಮಾನತುಗೊಳಿಸಬೇಕು. ಡಿವೈಎಸ್ಪಿ ಮತ್ತು ಸಂಪ್ಯ ಠಾಣಾ ಎಸ್ಐ ಹಾಗೂ ಸಿಬ್ಬಂದಿ ವರ್ಗದ ಮೇಲೆ ಕ್ರಮ ಕೈಗೊಳ್ಳಿ ಎಂದು ಪುತ್ತಿಲ ಒತ್ತಾಯಿಸಿದ್ದಾರೆ. ಈ ಘಟನೆ ಬಗ್ಗೆ ದ.ಕ ಎಸ್ಪಿಯವರಲ್ಲಿ ಮಾತನಾಡಿದ್ದೇನೆ. ಇಂತಹ ಕೃತ್ಯ ಮತ್ತೆ ಎಲ್ಲಿಯೂ ಮುಂದುವರಿಯಬಾರದು. ಇಂದು ಎಸ್ಪಿ ವಿಚಾರಣೆಗಾಗಿ ಪುತ್ತೂರಿಗೆ ಆಗಮಿಸುತ್ತಾರೆ. ಹಾಗಾಗಿ ಇಂದು ಸಂಜೆಯೊಳಗಡೆ ದೌರ್ಜನ್ಯ ಎಸಗಿದ ಪೊಲೀಸರಿರನ್ನು ಅಮಾನತು ಮಾಡಬೇಕು. ಜೊತೆಗೆ ಪೊಲೀಸರ ಮೇಲೆ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ದೌರ್ಜನ್ಯದ ಬಗ್ಗೆ ಮಾನವ ಹಕ್ಕು ಸಂಘಟನೆಗೆ ದೂರು ನೀಡುತ್ತೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ಇಂತಹ ಹಲವು ಘಟನೆ ನಡೆದಿದೆ. ಇವೆಲ್ಲವನ್ನ ಹಿಂದೂ ಸಮಾಜ ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದಕ್ಕೆ ಈ ಕೂಡಲೇ ಕಡಿವಾಣ ಹಾಕಿದರೆ ಚೆನ್ನಾಗಿರುತ್ತದೆ. ಇಲ್ಲದಿದ್ದಲ್ಲಿ ಹಿಂದೂ ಸಂಘಟನೆಗಳು ಸಂಘರ್ಷಕ್ಕೂ ಸಿದ್ಧ ಎಂದರು.