News Karnataka Kannada
Friday, May 03 2024
ಮಂಗಳೂರು

ಪುತ್ತೂರು: ಗೃಹಮಂತ್ರಿಯ ಭದ್ರತೆ ಪ್ರಶ್ನಿಸಿದ ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿ

ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿ
Photo Credit : News Kannada

ಪುತ್ತೂರು: ಕೇಂದ್ರ ಗೃಹಮಂತ್ರಿ ಅಮಿತ್ ಶಾ ಗೆ ದಕ್ಷಿಣಕನ್ನಡಕ್ಕೆ ಬರಲು ಜೀವ ಭಯವಿರುವ ಕಾರಣ, ಜಿಲ್ಲೆಯಲ್ಲಿ ಭಾರಿ ಪೊಲೀಸ್‌ ಬಂದೋಬಸ್ತ್ ಒದಗಿಸಲು ಕ್ರಮಕೈಗೊಳ್ಳಲಾಗಿದೆ.  ಆರ್ ಎಸ್ ಎಸ್ ಭದ್ರಕೋಟೆಯಾಗಿರುವ ದಕ್ಷಿಣಕನ್ನಡದಲ್ಲಿ ಬಜರಂಗದಳದವರೇ ಕೇಂದ್ರ ಗೃಹಮಂತ್ರಿಗೆ ರಕ್ಷಣೆ ನೀಡಲಿ ಎಂದು ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿ ಆಗ್ರಹಿಸಿದ್ಧಾರೆ.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾತನಾಡಿದ ಅವರು ಫೆಬ್ರವರಿ 11 ರಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕ್ಯಾಂಪ್ಕೋ   ಸುವರ್ಣ ವರ್ಷಾಚರಣೆ ಸಮಾರಂಭದಲ್ಲಿ ಭಾಗವಹಿಸಲು ಪುತ್ತೂರಿಗೆ ಬರುತ್ತಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಗೃಹಸಚಿವರಿಗೆ ಇಷ್ಟೊಂದು ಭದ್ರತೆ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು.

ಗೃಹಸಚಿವರ ಭೇಟಿ ಹಿನ್ನಲೆಯಲ್ಲಿ ಬೇರೆ  ಬೇರೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯ ಪೊಲೀಸರನ್ನು ಪುತ್ತೂರಿನಲ್ಲಿ ನಿಯೋಜಿಸಲಾಗಿದೆ. ಆರ್ ಎಸ್ ಎಸ್ ಸಂಘಟನೆಯ ಮೂಲನೆಲೆಯಾಗಿರುವ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಲು ಅಮಿತ್ ಶಾ ರಿಗೆ ಜೀವಭಯವಿದೆ.

ಜಿಲ್ಲೆಯ ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಗೃಹಮಂತ್ರಿಗೆ ಭದ್ರತೆ ಕೊಡುವ ಎಲ್ಲಾ ಅರ್ಹತೆ ಇರುವಾಗ ಇಷ್ಟೊಂದು ಪ್ರಮಾಣದ ಪೊಲೀಸರ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

ಜಿಲ್ಲೆಗೆ ಆಗಮಿಸುವ ಅಮಿತ್ ಶಾ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಳೆಗಾರರ ಸಂಸ್ಥೆಯಾದ ಕ್ಯಾಂಪ್ಕೋವನ್ನು ಕೂಡಾ ಗುಜರಾತಿನ ವ್ಯಾಪಾರಿಗಳಿಗೆ ಮಾರಾಟ ಮಾಡದಿದ್ದರೆ ಸಾಕು ಎಂದು ವ್ಯಂಗ್ಯವಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು