ಪುತ್ತೂರು: ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷದ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಬೆಂಬಲಿಗರ ಬೃಹತ್ ಸಭೆ ನಡೆಸಿದರು. ಈ ನಿಟ್ಟಿನಲ್ಲಿ ಮುಂದಿನ ನಡೆಯ ಬಗ್ಗೆ ಎರಡು ದಿನದೊಳಗೆ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಕಾರ್ಯಕರ್ತರ ಧ್ವನಿ ವಿಧಾನಸಭೆಯಲ್ಲಿ ಮೊಳಗಬೇಕಾದರೆ ಕಾರ್ಯಕರ್ತರ ನೋವು ನಲಿವು ಅರಿತಿರುವ ಸಂಘಟನೆಯಲ್ಲಿ ದುಡಿಯುವವರಿಗೆ ಅವಕಾಶ ಸಿಗಬೇಕು. ಆದರೆ ಕೆಲವು ವರ್ಷಗಳಿಂದ ಕಾರ್ಯಕರ್ತರನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ವಿವರಿಸಿದರು. ಪಕ್ಷವು ನಿಮ್ಮ ಭಾವನೆಗಳಿಗೆ ಬೆಲೆ ನೀಡದಿದ್ದರೆ ನಿಮ್ಮ ಧ್ವನಿಯಾಗಿ ಕೆಲಸ ಮಾಡಲು ಇನ್ನೆರಡು ದಿನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಘೋಷಿಸಿದರು.