Categories: ಮಂಗಳೂರು

ಪುತ್ತೂರು: ಡಾ. ನಝೀರ್ ಅಹಮ್ಮದ್ ಕ್ಲಿನಿಕಿನಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣೆ

ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಡಯಾಬಿಟಿಕ್ಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಮತ್ತು ಮೆರ್ಕ್ ಕಂಪೆನಿ ಸಹಯೋಗದಲ್ಲಿ ಥೈರಾಯಿಡ್ ಗ್ರಂಥಿಯ ಹಾಗೂ ಮಧುಮೇಹದ ಉಚಿತ ತಪಾಸಣೆ ಮಾ. 15ರಂದು ಕಲ್ಲಾರೆ ಕೃಷ್ಣ ಆರ್ಕೇಡಿನಲ್ಲಿರುವ ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕಿನಲ್ಲಿ ನಡೆಯಿತು.

ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತಕ್ಕೆ ಅಥವಾ ತಾಪಕ್ಕೆ ಅಸಹಿಷ್ಣುತೆ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು ಅಥವಾ ಕಡಿಮೆ ಆಗುವುದು, ಹೆಂಗಸರಿಗೆ ಅತಿಯಾದ ಮಾಸಿಕ ಸ್ರಾವ ಅಥವಾ ನಿಯಮ ತಪ್ಪಿದ ಮಾಸಿಕ ಸ್ರಾವ, ಮೃದುವಾದ ಕರ್ಕಶ ಸ್ವರ, ಗಂಟಲಿನಲ್ಲಿ ಊದುಕೊಳ್ಳುವಿಕೆ, ಅಧಿಕ ಎದೆ ಬಡಿತ ಅಥವಾ ರಕ್ತದೊತ್ತಡವುಳ್ಳವರು ಶಿಬಿರದಲ್ಲಿ ಪಾಲ್ಗೊಂಡರು.

ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಅವರು ಶಿಬಿರದಲ್ಲಿ ಪಾಲ್ಗೊಂಡ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಿದರು. ರೋಟರಿ ಕ್ಲಬ್ ಪುತ್ತೂರು ಕಾರ್ಯದರ್ಶಿ ಡಾ. ಶ್ರೀಪ್ರಕಾಶ್, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಅಧ್ಯಕ್ಷ ಗಣೇಶ್ ಎನ್. ಕಲ್ಲರ್ಪೆ ಉಪಸ್ಥಿತರಿದ್ದರು. ಎಸ್.ಆರ್.ಎಲ್. ಲ್ಯಾಬಿನ ಚಂದ್ರಕಲಾ, ಡಾ. ನಝೀರ್ ಅಹಮದ್ ಕ್ಲಿನಿಕ್ ಸಿಬ್ಬಂದಿಗಳು ಸಹಕರಿಸಿದರು.

Ashika S

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

10 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

30 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago