News Karnataka Kannada
Monday, April 29 2024
ಮಂಗಳೂರು

ಪುತ್ತೂರು ಪ್ಲವರ್ ಮಾರ್ಕೆಟ್ ಬಳಿ ಎರಡು ತಂಡಗಳ ನಡುವೆ ಹೊಡೆದಾಟ

ಹೂವಿನ ಮಾರುಕಟ್ಟೆ ಮುಂಭಾಗದಲ್ಲಿ ಎರಡು ತಂಡಗಳ ನಡುವೆ ಗುರುವಾರ ರಾತ್ರಿ ಹೊಡೆದಾಟ ನಡೆದಿದ್ದು, ರಸ್ತೆಯಲ್ಲೇ ಈ ಘಟನೆ ನಡೆದ ಹಿನ್ನಲೆಯಲ್ಲಿ ಕೆಲವು ಸಮಯ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು.
Photo Credit : News Kannada

ಪುತ್ತೂರು: ಹೂವಿನ ಮಾರುಕಟ್ಟೆ ಮುಂಭಾಗದಲ್ಲಿ ಎರಡು ತಂಡಗಳ ನಡುವೆ ಗುರುವಾರ ರಾತ್ರಿ ಹೊಡೆದಾಟ ನಡೆದಿದ್ದು, ರಸ್ತೆಯಲ್ಲೇ ಈ ಘಟನೆ ನಡೆದ ಹಿನ್ನಲೆಯಲ್ಲಿ ಕೆಲವು ಸಮಯ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು.

ಪುತ್ತೂರು ಕೋಟಿ ಚೆನ್ನಯ ಬಸ್ ನಿಲ್ದಾಣದ ಕೆಳಗಿನ ಗಾಂಧಿಕಟ್ಟೆ ಸಮೀಪ ಹಣ್ಣು ಹಂಪಲು ವಿತರಣೆ ಪಿಕಪ್ ವಾಹನದವರು ಮತ್ತು ಮಾರುತಿ 800 ಕಾರಿನವರ ನಡುವೆ ನಡುರಸ್ತೆಯಲ್ಲೇ ಹೊಡೆದಾಟ ನಡೆದಿದೆ.

ಎರಡೂ ಬಣಗಳು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಹೊಡೆದಾಟದ ಕಾರಣವನ್ನು ಬಹಿರಂಗ ಪಡಿಸಿಲ್ಲ. ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವುದನ್ನು ಗಮನಿಸಿ ಸ್ಥಳೀಯ ಅಂಗಡಿಯವರು ಎಚ್ಚರಿಕೆ ಕೊಟ್ಟ ನಂತರ ಎರಡು ತಂಡಗಳು ಅಲ್ಲಿಂದ ತೆರಳಿದೆ.

ಗುರುವಾರ ರಾತ್ರಿ ಮುಖ್ಯ ಪೇಟೆಯಲ್ಲೇ ಹೊಡೆದಾಟ ನಡೆದರು ಪೊಲೀಸರ ಪತ್ತೆಯೇ ಇರಲಿಲ್ಲ ಎಂಬ ಆರೋಪ ಸಾರ್ವಜನಿಕರ ವಲಯದಿಂದ ಕೇಳಿ ಬಂದಿದ್ದು, ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು