ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ದ.ಕ, ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇದರ ಸಹಯೋಗದೊಂದಿಗೆ ಪರ್ಲಡ್ಕ ಡಾ|ಶಿವರಾಮ ಕಾರಂತ ಈಜುಕೊಳದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೇಗಳಲ್ಲೊಂದಾದ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾರ್ಥಮಿಕ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿ ಲಿಖಿತ್ ರಾಮಚಂದ್ರ ರವರು 2 ಚಿನ್ನ ಮತ್ತು 1 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
14 ವರ್ಷ ವಯೋಮಿತಿಯೊಳಗಿನ ಬಾಲಕರ ಫ್ರೀ ಸ್ಟೈಲ್ ರಿಲೇ ತಂಡಕ್ಕೆ ಸಹ ಆಯ್ಕೆಯಾಗಿದ್ದಾರೆ.
ಲಿಖಿತ್ ರಾಮಚಂದ್ರರವರು ಜು.17 ರಂದು ಹಾಸನದಲ್ಲಿ ಡಿಪಾರ್ಟ್ಮೆಂಟ್ ಓಫ್ ಯೂತ್ ಎಂಪವರ್ಮೆಂಟ್ ಆಂಡ್ ಸ್ಪೊರ್ಟ್ಸ್ ವತಿಯಿಂದ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ 100ಮೀ ಮೆಡ್ಲೆ ರಿಲೇ ಯಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ಇವರು ಪುತ್ತೂರು ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರು ಆದ ರಾಮಚಂದ್ರ ಎ ಹಾಗೂ ದೀಪಾರಾಣಿ ಯವರ ಪುತ್ರ. ಇವರು ಡಾ|| ಶಿವರಾಮ ಕಾರಂತ ಬಾಲವನ ಪುತ್ತೂರು ಇಲ್ಲಿನ ಪುತ್ತೂರು ಅಕ್ವಾಟಿಕ್ ಕ್ಲಬ್ ನಲ್ಲಿ ಶ್ರೀಯುತ ಪಾರ್ಥ ವಾರಣಾಸಿ, ಶ್ರೀಯುತ ನಿರೂಪ್, ಶ್ರೀಯುತ ದೀಕ್ಷಿತ್ ರಾವ್ ಹಾಗು ಶ್ರೀಯುತ ರೋಹಿತ್ ರವರಿಂದ ಈಜು ತರಬೇತಿ ಪಡೆಯುತ್ತಿದ್ದಾರೆ.