News Karnataka Kannada
Sunday, May 05 2024
ಮಂಗಳೂರು

ಪುತ್ತೂರು: ಕಾರ್ಯಾಚರಣೆ ಗುಂಡ್ಯಕ್ಕೆ ಶಿಫ್ಟ್, ನೆಟ್ಟಾರು ಕ್ಯಾಂಪ್ ನಲ್ಲಿ ಉಳಿದ ಸಾಕಾನೆಗಳು

Operation shifted to Gundya, remaining sakanes at Nettaru camp
Photo Credit : News Kannada

ಪುತ್ತೂರು: ರೆಂಜಿಲಾಡಿ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದ ಹಂತಕ ಕಾಡಾನೆಯನ್ನು ಸೆರೆ ಹಿಡಿದ ಬಳಿಕ, ಉಪಟಳ ನೀಡುವ ಉಳಿದ ಆನೆಗಳ ಪತ್ತೆ ಕಾರ್ಯವನ್ನು ಅರಣ್ಯ ಇಲಾಖೆ ಮುಂದುವರಿಸಿದೆ. ಆದರೆ ಆನೆಗಳು ಸ್ಥಳ ಬದಲಾಯಿಸುತ್ತಿದ್ದು, ಕಾರ್ಯಾಚರಣೆಯನ್ನು ಆ ಭಾಗಕ್ಕೆ ಸ್ಥಳಾಂತರಿಸುವ ಅಗತ್ಯ ಎದುರಾಗಿದೆ.

ಗುಂಡ್ಯ ಭಾಗದಲ್ಲಿ ಅರಣ್ಯ ಇಲಾಖೆ ನರ್ಸರಿಗಳನ್ನು ಕಾಡಾನೆಗಳು ಹಾಳು ಗೆಡವಿದೆ ಎನ್ನುವ ಮಾಹಿತಿ ಲಭಿಸಿದ್ದು, ಕಾರ್ಯಾಚರಣೆಯನ್ನು ಆ ಭಾಗಕ್ಕೆ ಕೇಂದ್ರಿಕರಿಸಲಾಗಿದೆ. ಮೊದಲಿಗೆ ಆನೆಗಳ ಪತ್ತೆ ಕಾರ್ಯ ನಡೆದ ಬಳಿಕವಷ್ಟೇ ಅವುಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ.

ಒಟ್ಟು 5 ಆನೆಗಳ ಪೈಕಿ ಅಭಿಮನ್ಯು ಹಾಗೂ ಇನ್ನೊಂದು ಆನೆಯನ್ನು ಸೆರೆ ಹಿಡಿದ ಕಾಡಾನೆಯ ಜೊತೆ ಕಳುಹಿಸಲಾಗಿದೆ. ಉಳಿದಂತೆ 3 ಆನೆಗಳನ್ನು ನೆಟ್ಟಾರು ಬಳಿಯ ಕ್ಯಾಂಪ್ ನಲ್ಲಿ ಉಳಿಸಲಾಗಿದೆ. ಗುಂಡ್ಯ ಅಥವಾ ಇನ್ನಾವುದೇ ಭಾಗದಲ್ಲಿ ಕಾಡಾನೆಗಳು ಪತ್ತೆಯಾದರೆ, ಅವಕ್ಕೆ ಅರಿವಳಿಕೆ ಚುಚ್ಚುಮದ್ದು ನೀಡಿ, ಬಳಿಕ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಯಲಿದೆ ಎಂದು ಹೇಳಲಾಗಿದೆ.

7 ಮಂದಿ ಸೆರೆ: ಗುರುವಾರ ರಾತ್ರಿ ಕಾಡಾನೆಯನ್ನು ಸೆರೆ ಹಿಡಿದು, ಲಾರಿಗೆ ಹತ್ತಿಸುವ ವೇಳೆಯಲ್ಲಿ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ 7 ಮಂದಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಕಾಡಾನೆಯನ್ನು ಕೊಂಡೊಯ್ಯುವ ವೇಳೆಯಲ್ಲಿ, ಉಪಟಳ ನೀಡುವ ಎಲ್ಲಾ ಆನೆಗಳನ್ನು ಸೆರೆ ಹಿಡಿದ ಬಳಿಕವೇ ಸ್ಥಳದಿಂದ ತೆರಳುವಂತೆ ಸ್ಥಳೀಯರು ಪಟ್ಟು ಹಿಡಿದರು. ಈ ಸಂದರ್ಭ ವಾಗ್ವಾದ ನಡೆದು, ಸಿಬ್ಬಂದಿಗಳ ವಿರುದ್ಧವೇ ಸ್ಥಳೀಯರು ತಿರುಗಿ ಬೀಳುವಂತಾಯಿತು. ಆಗ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ 7 ಮಂದಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಉಮೇಶ್, ರಾಜೇಶ್ ಕನ್ನಡ್ಕ, ಜನಾರ್ಧನ್ ರೈ, ಕೋಕಿಲ ನಂದ, ತೀರ್ಥಕುಮಾರ, ಗಂಗಾಧರ ಗೌಡ, ಅಜಿತ್ ಕುಮಾರ್ ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು