ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಭೂಕುಸಿತ, ಧರೆ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ದ.ಕ. ಜಿಲ್ಲೆಯ ಪುತ್ತೂರಿನ ಬಪ್ಪಳಿಗೆಯಲ್ಲಿ ಮನೆ ಪಕ್ಕದಲ್ಲಿದ್ದ ಬಾವಿ ಕುಸಿದು ಅನಾಹುತವಾಗಿದೆ. ಬಪ್ಪಳಿಗೆಯ ಸುಶೀಲಾ ಎಂಬುವರಿಗೆ ಸೇರಿದ ಮನೆ ಪಕ್ಕದಲ್ಲಿರುವ ಬಾವಿ ಕುಸಿದಿದ್ದು, ಇದರ ಪರಿಣಾಮವಾಗಿ ಸುಶೀಲಾ ಅವರ ಮನೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.
ಅಗ್ನಿಶಾಮಕದಳ ಸದಸ್ಯರು ಮನೆ ಮಂದಿಯನ್ನು ರಕ್ಷಣೆ ಮಾಡಿದ್ದು, ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಅಲ್ಲದೆ ಮನೆ ಸುತ್ತಲೂ ತಾತ್ಕಾಲಿಕ ತಡೆ ಹಾಕಿ ಯಾರೂ ಕೂಡ ಅತ್ತ ಸುಳಿಯದಂತೆ ಸೂಚನೆ ನೀಡಿದ್ದಾರೆ. ಸ್ಥಳಕ್ಕೆ ನಗರಸಭಾ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.