News Karnataka Kannada
Saturday, May 04 2024
ಮಂಗಳೂರು

ಪುತ್ತೂರು: ಪ್ರತಿ ದಿಟ್ಟ ನಿರ್ಧಾರದ ಹಿಂದೆ ಸಮರ್ಥ ಚಿಂತನೆ, ಅಣ್ಣಾಮಲೈ ಹೇಳಿಕೆ

Puttur: Singam fame Annamalai interacts with young voters
Photo Credit : News Kannada

ಪುತ್ತೂರು: ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ, ಸಿಂಗಂ ಖ್ಯಾತಿಯ ಅಣ್ಣಾಮಲೈ ಅವರು ಯುವ ಮತದಾರರೊಂದಿಗೆ ಶನಿವಾರ ಸಂವಾದ ನಡೆಸಿದರು.

ರಾಷ್ಟ್ರೀಯ ವಿಚಾರಧಾರೆಯೊಂದಿಗೆ ಪಡೆಯುವ ಶಿಕ್ಷಣ ಯುವಜನಾಂಗವನ್ನು ಪ್ರಜ್ಞಾವಂತರನ್ನಾಗಿಸುತ್ತದೆ. ಮಾತ್ರವಲ್ಲ, ದೇಶಕಟ್ಟುವ ಕಾಯಕದಲ್ಲಿ ಪ್ರತಿಯೋರ್ವರನ್ನು ಸಮರ್ಥವಾಗಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡುತ್ತದೆ. ಶಿಕ್ಷಣ ಪಡೆಯುತ್ತಾ ಹೋದಂತೆ, ಮನಸ್ಸು ದೇಶಪ್ರೇಮದಿಂದ ವಿಚಲಿತವಾಗದಂತೆ ನೋಡಿಕೊಳ್ಳುತ್ತದೆ. ಆದ್ದರಿಂದ ಶಿಕ್ಷಣ ಪಡೆಯುವ ಜೊತೆಜೊತೆಗೆ ರಾಷ್ಟ್ರೀಯ ವಿಚಾರಧಾರೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸುವ ಶಿಕ್ಷಣ ಸಂಸ್ಥೆಗಳು ದೇಶಕ್ಕೆ ಮಾದರಿ ಎಂದು ಅಣ್ಣಾಮಲೈ ಅಭಿಪ್ರಾಯಪಟ್ಟರು.

ಸುಡಾನಿನಲ್ಲಿ ತೊಂದರೆ ಅನುಭವಿಸುತ್ತಿದ್ದ ಭಾರತೀಯರನ್ನು ನಮ್ಮ ಸೈನಿಕರು ದೇಶಕ್ಕೆ ವಾಪಾಸ್ ಕರೆತಂದಿದ್ದಾರೆ. ಇದರ ಹಿಂದೆ ಟರ್ಕಿಯಲ್ಲಿ ಸಿಲುಕಿಕೊಂಡಿದ್ದ ಜನರನ್ನು ಭಾರತೀಯ ಏರ್ ಫೋರ್ಸ್ ಹಿಂದಕ್ಕೆ ಕರೆತಂದಿದೆ. ಇಂತಹ ದಿಟ್ಟತನದ ಕಾರ್ಯಾಚರಣೆಯ ಹಿಂದೆ ದೇಶದ ಸಮರ್ಥ ನಾಯಕತ್ವ ಇದೆ ಎನ್ನುವುದನ್ನು ನಾವು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಯುವ ಮತದಾರರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅಣ್ಣಾಮಲೈ, ಬಿಜೆಪಿ ತನ್ನ ಹುಟ್ಟಿನಿಂದ ಇದುವರೆಗೆ ಹಿಂದುತ್ವವನ್ನೇ ಪ್ರತಿಪಾದಿಸುತ್ತಾ ಬಂದ ಪಕ್ಷ. ವ್ಯಕ್ತಿಯೋರ್ವ ಹಿಂದುತ್ವವನ್ನು ಪ್ರತಿಪಾದನೆ ಮಾಡುವಾಗ ಅದನ್ನು ಯಾರೂ ಪ್ರಶ್ನಿಸುವಂತಿಲ್ಲ. ಅದೇ ವ್ಯಕ್ತಿ ಪಕ್ಷದೊಳಗಡೆ ಇದ್ದರೆ, ಆಗ ದಂಡಿಸುವ ಅಧಿಕಾರ ಪಕ್ಷಕ್ಕಿದೆ. ಪಕ್ಷ ತನ್ನ ವ್ಯಾಪ್ತಿಯಲ್ಲಿ ಹಿಂದುತ್ವದ ಪ್ರತಿಪಾದನೆಗಾಗಿ ಯಾರನ್ನು ಯಾವ ಸಂದರ್ಭದಲ್ಲಿ ಬಳಸಿಕೊಳ್ಳಬೇಕು ಎನ್ನುವುದನ್ನು ತಿಳಿದುಕೊಂಡಿದೆ ಎಂದರು.

ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿದರು. ಸಾಂಸ್ಕೃತಿಕ ಚಿಂತಕ ಪ್ರಕಾಶ್ ಮಲ್ಪೆ ಅವರು ಸಂವಹನಕಾರರಾಗಿ ಸಹಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು