News Karnataka Kannada
Monday, May 06 2024
ಮಂಗಳೂರು

ಜೂ.24ರಂದು ಸ್ಪೀಕರ್ ಯು.ಟಿ.ಖಾದರ್ ಮತ್ತು ಶಾಸಕ ಅಶೋಕ್ ರೈಗೆ ಸನ್ಮಾನ

Puttur: Speaker U T Khader and MLA Ashok Rai will be felicitated on June 24.
Photo Credit : News Kannada

ಪುತ್ತೂರು: ಪುತ್ತೂರಿನ ಮುಸ್ಲಿಂ ಸಮುದಾಯ ಒಕ್ಕೂಟದ ವತಿಯಿಂದ ರಾಜ್ಯದ ಸ್ಪೀಕರ್ ಯು.ಟಿ.ಖಾದರ್ ಮತ್ತು ಪುತ್ತೂರಿನ ಶಾಸಕ ಅಶೋಕ್‌ಕುಮಾರ್ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ಜೂ.24ರಂದು ಸಂಜೆ ಗಂಟೆ 4.30ಕ್ಕೆ ಪುತ್ತೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ನಿರ್ದೇಶಕ ಮಹಮ್ಮದ್ ಸಿಯಾನ್ ಪರ್ಲಡ್ಕ ಅವರು ತಿಳಿಸಿದರು.

ಪುತ್ತೂರಿನ ಕೇಂದ್ರ ಜುಮ್ಮಾ ಮಸೀದಿಯ ಖತೀಬ್ ಅಹ್ಮದ್ ಪೂಕೋಯ ತಂಞಳ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪುತ್ತೂರು ನಗರಸಭೆಯ ಸದಸ್ಯ ರಿಝಾಝ್ ರ‍್ಲಡ್ಕ ಅವರು ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಂಜೇಶ್ವರ ಶಾಸಕ ಪಿ.ಕೆ.ಎಂ.ಅಶ್ರಫ್, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್‌ನ ಸಂಚಾಲಕ ಡಾ.ಬಶೀರ್ ಅಹ್ಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಸ್ಲಿಂ ಸಮುದಾಯ ಒಕ್ಕೂಟದ ಸದಸ್ಯರಾದ ಸಿದ್ದಿಕ್ ಸುಲ್ತಾನ್, ಶರೀಫ್ ಬಲ್ನಾಡು ಮತ್ತು ರಶೀದ್ ಮುರ ಅವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು