Categories: ಮಂಗಳೂರು

ಪುತ್ತೂರು: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ

ಪುತ್ತೂರು: ಕೆಯ್ಯೂರಿನ ಯುವತಿಯೋರ್ವರು ಬೆಂಗಳೂರುನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆಯಾಗಿರುವ ಸೋಮಾವತಿ ರೈ ದಂಪತಿಯ ಏಕೈಕ ಪುತ್ರಿ ಶ್ರುತಿ ಸಿ.ರೈ (22ವ.)ಮೃತಪಟ್ಟವರು.

ಕಳೆದೆರಡು ವರ್ಷಗಳಿಂದ ಬೆಂಗಳೂರುನಲ್ಲಿ ಅನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಅವರು ಅಲ್ಲೇ ವಾಸ್ತವ್ಯವಿದ್ದರು. ಕೋರ್ಸ್‌ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರು. ಬಾಡಿಗೆ ರೂಮ್‌ನಲ್ಲಿದ್ದ ಅವರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ವಿಷಯ ತಿಳಿದು ಕೂಡಲೇ ಅವರನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಏ.30ರಂದು ಮೃತಪಟ್ಟಿದ್ದು ಮೇ 1ರಂದು ಮೃತದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಇದ್ದ ಏಕೈಕ ಪುತ್ರಿಯನ್ನು ಕಳೆದುಕೊಂಡಿರುವ ಚಂದ್ರಶೇಖರ್ ರೈ ಕುಟುಂಬ ದುಃಖಸಾಗರದಲ್ಲಿ ಮುಳುಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

Ashika S

Recent Posts

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

9 mins ago

ಲೋಕಸಭಾ ಚುನಾವಣೆ: ಬಿಜೆಪಿ ಒಂದಂಕಿ ದಾಟಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ ಈ ಸಲ ಒಂದಂಕಿ ಸಂಖ್ಯೆ‌ ದಾಟುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

19 mins ago

4 ದಿನ ಎಸ್‌ಐಟಿ ಕಸ್ಟಡಿಗೆ ಹೆಚ್‌.ಡಿ.ರೇವಣ್ಣ: ನ್ಯಾಯಾಲಯ ಆದೇಶ

ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ  ವಶಕ್ಕೆ…

39 mins ago

ನಾಯಿಗಳಿಗೆ ಊಟ ಹಾಕುತ್ತಿದ್ದ ವೇಳೆ ಅಡ್ಡಿ: ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ದೂರು

ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ…

1 hour ago

ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರ ದಾಳಿ: ಹಲವರು ಸೇನೆಯ ವಶಕ್ಕೆ

ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಗಿಳಿದ ಸೇನೆ ಹಲವರನ್ನು…

1 hour ago

ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದ ಸಿದ್ದರಾಮಯ್ಯ

ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

2 hours ago