ಪುತ್ತೂರು: ಚೂರಿ ಇರಿತಗೊಳಗಾಗಿ ಗಂಭೀರ ಗಾಯಗೊಂಡ ಯುವತಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಅಳಿಕೆ ಮೂಲದ ಗೌರಿ ಅವರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆ ಬಳಿ ಪದ್ಮರಾಜ್ ಎಂಬಾತ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದ.
ಗಂಭೀರ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಗೌರಿ ಮೃತಪಟ್ಟಿದ್ದಾರೆ. ಚೂರಿ ಇರಿತ ನಡೆಸಿದ ಪದ್ಮರಾಜ್ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ತಿಳಿದು ಬಂದಿದ್ದು, ಕಳೆದ ಕೆಲ ವರ್ಷಗಳಿಂದ ಗೌರಿ ಹಾಗೂ ಪದ್ಮರಾಜ್ ಪ್ರೀತಿಸುತ್ತಿದ್ದು, ಇದೇ ವಿಚಾರದಲ್ಲಿ ಗುರುವಾರ ಮಧ್ಯಾಹ್ನ ಪುತ್ತೂರು ಬಸ್ ನಿಲ್ದಾಣ ಬಳಿ ಇಬ್ಬರಿಗೂ ವಾಗ್ವಾದ ನಡೆದಿತ್ತು. ಬಳಿಕ ಯುವತಿ ಗೌರಿ ಮಹಿಳಾ ಠಾಣೆಗೆ ದೂರು ನೀಡಲು ಬಂದಿದ್ದರು. ಈ ವೇಳೆ ಪದ್ಮರಾಜ್ ಚೂರಿ ಇರಿತ ನಡೆಸಿದ್ದ ಎಂದು ತಿಳಿದು ಬಂದಿದೆ.