ಮಂಗಳೂರು: ಆಡು ನುಂಗಲು ವಿಫಲಯತ್ನ ಮಾಡಿದ ಹೆಬ್ಬಾವು ನುಂಗಲು ಸಾದ್ಯವಾಗದೇ ಆಡನ್ನು ಬಿಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಇಲ್ಲಿನ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಆಹಾರ ಅರಸಿ ನಾಡಿಗೆ ಬಂದ ಭಾರೀ ಗಾತ್ರದ ಹೆಬ್ಬಾವು ಆಡೊಂದನ್ನು ಬೇಟೆಯಾಡಿದೆ. ಹಿಡಿದ ಆಡನ್ನು ನುಂಗಲು ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿ ನಂತರ ಸಾಧ್ಯವಾಗದೇ ಆಡನ್ನು ಬಿಟ್ಟುತೆರಳಿದೆ.
ಗ್ರಾಮದ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಬೇಟೆಯಾಡಿದ ಆಡಿನ ತಲೆಯ ಭಾಗವನ್ನು ನುಂಗಿದರೂ ಉಳಿದ ಭಾಗವನ್ನು ಹೆಬ್ಬಾವಿಗೆ ನುಂಗಲು ಸಾಧ್ಯವಾಗದೆ ಸೋತು ಸತ್ತ ಆಡನ್ನು ಸ್ಥಳದಲ್ಲೇ ಬಿಟ್ಟು ಕಾಡುನಲ್ಲಿ ಮರೆಯಾಗಿದೆ.