News Karnataka Kannada
Saturday, May 11 2024
ಮಂಗಳೂರು

ಮಂಗಳೂರು: ರಾಹುಲ್ ಗಾಂಧಿಯವರ ಪಾದಯಾತ್ರೆ ಐತಿಹಾಸಿಕ ಎಂದ ಯು.ಟಿ.ಖಾದರ್

Assembly Speaker U T Khader addresses press conference in Mangaluru
Photo Credit : Facebook

ಮಂಗಳೂರು, ಸೆ.24: ರಾಹುಲ್ ಗಾಂಧಿಯವರ ಪಾದಯಾತ್ರೆ ಐತಿಹಾಸಿಕ ಪಾದಯಾತ್ರೆ. ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಮೂರುವರೆ ಸಾವಿರ ಕಿ.ಮೀ ಐತಿಹಾಸಿಕ ಪಾದಯಾತ್ರೆ, ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಸರಕಾರದ ಅಭಿವೃದ್ಧಿ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲ. ಅದಕ್ಕಾಗಿ ಕಾರ್ಯಕರ್ತರು ಮತ್ತು ಜನರ ಮಧ್ಯೆ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಲ್ಲಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಒಗ್ಗಟ್ಟಿನಲ್ಲಿದ್ದಾರೆ. ಪಕ್ಷದಲ್ಲಿ ಒಗ್ಗಟ್ಟಿಲ್ಲ ಎಂಬುದು ಬಿಜೆಪಿಯ ಅಪಪ್ರಚಾರ.

ಕಾಂಗ್ರೆಸ್ ನ ಶಾಸಕರು, ಸಂಸದರು ಪಕ್ಷ ಬಿಟ್ಟು ಹೋದರೂ ತತ್ವಾದರ್ಶ ಬದಲಾಗಲ್ಲ. ನಮ್ಮ ತತ್ವ ಒಂದು ರಾಜ್ಯಕ್ಕೆ ಸೀಮಿತವಾಗಿಲ್ಲ, ಇಡೀ ದೇಶಕ್ಕೆ ಒಂದೇ ಆಗಿದೆ.ಎಂದು ಖಾದರ್ ನುಡಿದರು.

ಕಾಂಗ್ರೆಸ್  ಪಕ್ಷ ಯಾವತ್ತೂ ಸಿದ್ಧಾಂತ ತಪ್ಪಿಲ್ಲ. ಏಕ್ ಭಾರತ್ ಶ್ರೇಷ್ಠ ಭಾರತ್ ಅಂತ ಮಹಾತ್ಮಾ ಗಾಂಧಿಯವರೇ ಹೇಳಿದ್ದಾರೆ ಭಾರತ್ ಜೋಡೋ ಯಾತ್ರೆ ಕೇರಳದಿಂದ ಯಶಸ್ವಿಯಾಗಿ ಸಾಗುತಿದೆ. ಈ ತಿಂಗಳ ಕೊನೆಗೆ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಬರಲಿದೆ.  ಸರ್ವ ಜನರನ್ನು ಬೆಸೆಯುವುದು,  ಸರ್ವರಿಗೂ ಆತ್ಮವಿಶ್ವಾಸ ನೀಡುವುದು ಈ ಯಾತ್ರೆಯ ಉದ್ದೇಶ ಎಂದು ಅವರು ಹೇಳಿದರು.

ಪೇ ಸಿಎಂ ಪೋಸ್ಟರ್ ಅಂಟಿಸುವ ಅಭಿಯಾನ ನಾವು ಮಾಡಿದ್ದೇವೆ , ಕಾಂಗ್ರೆಸ್ ‌ನವರು ಮಾಡಿದರೆ ತಪ್ಪು, ಬಿಜೆಪಿಯವರು ಸೋಶಿಯಲ್ ‌ಮೀಡಿಯಾದಲ್ಲಿ ಏನು ಬೇಕಾದರೂ ಹಾಕಬಹುದೇ ?  ರಾಹುಲ್, ಸೋನಿಯಾ, ಸಿದ್ದರಾಮಯ್ಯ ಬಗ್ಗೆ ಇವರು ಸೋಶಿಯಲ್ ‌ಮೀಡಿಯಾದಲ್ಲಿ ಏನೇನೂ ಹಾಕಿಲ್ವಾ? ಆಗ ಯಾಕೆ ತನಿಖೆ ಮಾಡಿಲ್ಲ, ಆ ಬಗ್ಗೆಯೂ ತನಿಖೆ ಆಗಲಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು