ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಸಂದರ್ಭದಲ್ಲಿ ರಾಜ್ಯ ಸರಕಾರ ಸರಣಿ ಅಪಮಾನ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ದೂರಿದ್ದಾರೆ.
ನಾರಾಯಣಗುರು ಜನ್ಮ ದಿನೋತ್ಸವದ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು ನಾನು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕರೆಸಿಕೊಂಡು ಸರಕಾರಿ ಕಾರ್ಯಕ್ರಮ ಮಾಡಬೇಕೆಂದು ಆಹ್ವಾನಿಸಿ ಅವರು ಬಂಟ್ವಾಳಕ್ಕೆ ಬಂದು ಭರವಸೆ ಕೊಟ್ಟು ಜನ್ಮ ದಿನವನ್ನು ಸರಕಾರಿ ಕಾರ್ಯಕ್ರಮವನ್ನಾಗಿ ಮಾಡಲು ಆದೇಶ ನೀಡಿದರು.
ಆದರೆ ಈ ಬಾರಿ ಸರಕಾರ ಅದನ್ನು ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ನಲ್ಲಿ ಮಾಡಬೇಕಾಗಿತ್ತು ಬ್ರಹ್ಮ ಶ್ರೀಗಳು ಇಡೀ ಸಮಾಜಕ್ಕೆ ಸೇರಿದವರು. ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಬ್ರಹ್ಮ ಶ್ರೀಗಳಿಗೆ ಗೌರವ ಕೊಡುವ ಕೆಲಸವನ್ನು ಮಾಡಿದ್ದರು ಆದರೆ ಇವತ್ತು ಬ್ರಹ್ಮಶ್ರೀ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟಕ್ಕೆ ಸೀಮಿತಗೊಳಿಸಿದರು.
ನಾರಾಯಣಗುರು ಸ್ಥಾಪಿಸಿದ ಕುದ್ರೋಳಿ ಕ್ಷೇತ್ರದಲ್ಲಿ ಮಾಡಬಹುದಿತ್ತು ಅದನ್ನು ಮಾಡಿಲ್ಲ . ಈ ಹಿಂದೆ ಸರಕಾರದ ವತಿಯಿಂದ ಕಾರ್ಯಕ್ರಮ ನಡೆದರೂ ಸಿದ್ದರಾಮಯ್ಯನವರನ್ನು ಬಿಟ್ಟು ಯಡಿಯೂರಪ್ಪ , ಸಿಎಂ ಬೊಮ್ಮಯ್ಯ ಯಾಗಲಿ ಈ ಬ್ರಹ್ಮಶ್ರೀ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ. ಹೀಗಾಗಿ ಬಿಜೆಪಿಯವರು ಸರಣಿ ಅಪಮಾನವನ್ನು ಬ್ರಹ್ಮ ಶ್ರೀಗಳಿಗೆ ಮಾಡಿದ್ದಾರೆ ಎಂದು ದೂರಿದರು ಸ್ತಬ್ಧಚಿತ್ರ ತಿರಸ್ಕಾರ ಮಾಡಿದರು ಹತ್ತನೇ ತರಗತಿ ಪುಸ್ತಕದಲ್ಲಿ ಪಾಠ ಕೈಬಿಟ್ಟರು ಹೀಗೆ ಸರಣಿ ಹವಾಮಾನ ಮಾಡಿಕೊಂಡು ಬಂದರು ಎಂದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ