News Karnataka Kannada
Tuesday, April 30 2024
ಮಂಗಳೂರು

‘ರಂಗ್‌‌ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿ ಪ್ರಕರಣ – ಆರು ಮಂದಿ ಆರೋಪಿಗಳಿಗೆ ಜಾಮೀನು

'Rang Da Barsa' event disrupted, six accused granted bail
Photo Credit : News Kannada

ಮಂಗಳೂರು:  ಮರೋಳಿಯಲ್ಲಿ ಭಾನುವಾರದಂದು ಹೋಳಿ ಪ್ರಯುಕ್ತ ಆಯೋಜಿಸಲಾಗಿದ್ದ ರಂಗ್‌‌ದ ಬರ್ಸಾ ಕಾರ್ಯಕ್ರಮಕ್ಕೆ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದ ಬಜರಂಗ ದಳ ಕಾರ್ಯಕರ್ತರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಯುವಕ-ಯುವತಿಯರು ಅಶ್ಲೀಲವಾಗಿ ನಡೆದುಕೊಳ್ಳುತ್ತಾರೆ, ಅನ್ಯಕೋಮಿನ ಯುವಕರು ಕೂಡ ಪಾಲ್ಗೊಳ್ಳುತ್ತಾರೆ ಎಂದು ಆರೋಪಿಸಿ ಬಜರಂಗದಳದ ಆರು ಮಂದಿ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಕಾರ್ಯಕ್ರಮಕ್ಕೆ ಹಾಕಲಾಗಿದ್ದ ಬ್ಯಾನರ್‌ ಹರಿದು ಹಾಕಿದ್ದರು. ಇನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು