ಪುತ್ತೂರು: ನವರಾತ್ರಿ ಹಬ್ಬದ ಹಿನ್ನೆಲೆ ಪುತ್ತೂರಿನಲ್ಲಿ ಕ್ಷಿಪ್ರ ಕಾರ್ಯ ಪಡೆ ಮತ್ತು ಪೊಲೀಸರಿಂದ ಪಥ ಸಂಚಲನ ನಡೆಯಿತು.
ನವರಾತ್ರಿ ಸಂದರ್ಭ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರಿನ ದರ್ಬೆ ವೃತ್ತದಿಂದ ಬೊಳ್ವಾರ್ ವರೆಗೆ ಪಥ ಸಂಚಲನ ನಡೆಸಲಾಯಿತು.
ನಗರದುದ್ದಕ್ಕೂ ಸೈರನ್ ಮೊಳಗಿಸುತ್ತಾ ಆರ್ ಎಎಫ್ ಸಿಬ್ಬಂದಿಗಳು ಪಥ ಸಂಚಲನ ನಡೆಸಿದರು. ಪುತ್ತೂರು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.