ಮಂಗಳೂರು: ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹ ಶಿಷ್ಯವೇತನ ಯೋಜನೆ ಅನುಷ್ಠಾನಗೊಂಡಿದೆ.
ಮೆಟ್ರಿಕ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2,000 ರೂ.ಗಳಿಂದ 11,000 ರೂ.ಗಳ ವರೆಗೆ ಈ ಯೋಜನೆಯಲ್ಲಿ ಶಿಷ್ಯ ವೇತನ ನೀಡಲಾಗುತ್ತಿದೆ.
ಆಸಕ್ತ ವಿದ್ಯಾರ್ಥಿಗಳು http//ssp.post matric.karnataka.gov.in ವೆಬ್ಸೈಟ್ ಮೂಲಕ ಹೆಸರು ನೋಂದಣಿ ಮಾಡಬಹುದಾಗಿದೆ. ಇತರೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ರೈತ ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದರೂ ಅವರು ವಿದ್ಯಾರ್ಥಿವೇತನಕ್ಕೆ ಅರ್ಹರಾಗಿರುತ್ತಾರೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.