ಮಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದಕ್ಷಿಣ ಕನ್ನಡದಲ್ಲಿ ದೀಪಕ್ ರಾವ್,ಫಾಜೀಲ್,ಜಲೀಲ್,ಮಸೂದ್ ಹತ್ಯೆ ಪ್ರಕರಣದ ಮರುತನಿಖೆಗೆ ಆದೇಶ ನೀಡಬೇಕು ಮತ್ತು ಎಲ್ಲಾ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಹಲವು ಸಂಘಟನೆಗಳ ಮೂಲಕ ಒತ್ತಾಯಿಸಲಾಗಿತ್ತು.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎರಡು ದಿನ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಮಂಗಳೂರಿಗೆ ಆಗಮಿಸಿದ ಅವರು ದಕ್ಷಿಣ ಕನ್ನಡದಲ್ಲಿ ನಡೆದಿದ್ದ ದೀಪಕ್ ರಾವ್,ಫಾಜೀಲ್,ಜಲೀಲ್,ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಮತ್ತು ಪರಿಹಾರ ನೀಡಲು ಬೇಕಾದ ವರದಿ ನೀಡಲು ಸೂಚಿಸಿದ್ದೇನೆ ಎಂದರು.
ಆದಷ್ಟು ಶೀಘ್ರದಲ್ಲಿ ಸರ್ಕಾರ ಈ ಕುಟುಂಬಗಳಿಗೆ ಪರಿಹಾರ ನೀಡಲಿದೆ. ಈ ವೇಳೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಡ್ರಗ್ಸ್ ಮಾಫಿಯಾ ತಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು. ಅಗಸ್ಟ್ 15 ರೊಳಗೆ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳುಯವುದಾಗಿ ಭರವಸೆ ನೀಡಿದರು.
ಅಶಾಂತಿ ಸೃಷ್ಠಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ, ಇಲ್ಲಿನ ವಿದ್ಯಾರ್ಥಿಗಳು ಯುವಕರು ನಮ್ಮ ಜೊತೆ ಕೈ ಜೋಡಿಸಿ ಮಂಗಳೂರಿನಲ್ಲಿ ಶಾಂತಿ-ಸಾಮರಸ್ಯವನ್ನು ಕಟ್ಟಲು ಸಹಕರಿಸಿ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು…
ಇದೀಗ ಅಧಿಕ ಬಿಸಿಲಿನ ತಾಪಮಾನ ಹಾಗೂ ಬಿಸಿಗಾಳಿಯಿಂದ ತತ್ತರಿಸುತ್ತಿದೆ. ಧಾರವಾಡ ಜಿಲ್ಲೆಯ ಜನರಂತೂ ಬಿಸಿಲಿನ ತಾಪಮಾನದಿಂದ ತತ್ತರಿಸಿ ಹೋಗಿದ್ದಾರೆ.
ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಸಾವಿರಾರು ಮಂದಿ ಭಕ್ತರು ಭೇಟಿ ನೀಡುತ್ತಿದ್ದು, ಇದೀಗ ಪಾಕಿಸ್ತಾನದಿಂದಲೂ ಇಂದು ಬಾಲರಾಮನ ದರ್ಶನ ಪಡೆಯಲು…
ರಾಜಸ್ಥಾನ್ ರಾಯಲ್ಸ್ ತಂಡವು ನಟ ಕಿಚ್ಚ ಸುದೀಪ್ ಅವರಿಗೆ ರಾಜಸ್ಥಾನ್ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.
ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆ ತೆರಳಬೇಕಿದ್ದ ಹೆಲಿಕಾಪ್ಟರ್ ಪತನಗೊಂಡ ದೃಶ್ಯ ಸಮೇತ ಘಟನೆ ಮಹಾದ್ನಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಯಾವುದೇ…
ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾದ ಘಟನೆ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ.