News Karnataka Kannada
Monday, April 29 2024
ಮಂಗಳೂರು

ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ. ಪ್ರವೀಣ್ ಮಾರ್ಟಿಸ್ ನೇಮಕ

Alou
Photo Credit : NewsKarnataka

ಮಂಗಳೂರು: ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜು ಇತ್ತೀಚೆಗೆ ಯುಜಿಸಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವೆಂದು ಮಾನ್ಯತೆ ಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಿದ್ದ ರೆ.ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಅವರು ಅದರ ಪ್ರಥಮ ಕುಲಪತಿಯಾಗಿ ನೇಮಕಗೊಂಡಿರುತ್ತಾರೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರೊವಿನ್ಶಿಯಲ್ ಹಾಗೂ ಕುಲಾಧಿಪತಿಯವರಾದ ವಂ. ಫಾ. ಡಯನೀಶಿಯಸ್ ವಾಜ್‍ರವರು ಇತ್ತೀಚೆಗೆ ಔಪಚಾರಿಕವಾಗಿ ಘೋಷಿಸಿದ್ದಾರೆ.

ಮೇ 20, 1974 ರಂದು ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ಜನಿಸಿದ ವಂ. ಡಾ. ಪ್ರವೀಣ್ ಮಾರ್ಟಿಸ್ ರವರು, ಶಂಕರಪುರದ ಸಂತ ಜಾನ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ಶಿಕ್ಷಣವನ್ನು ಪಡೆದರು ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನದಲ್ಲಿ ಪದವಿ ಪಡೆದರು. ಮುಂದೆ, ಅವರು ಬೆಂಗಳೂರಿನ ಪ್ರತಿಷ್ಠಿತ ಸಂತ ಜೋಸೆಫ್ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ತಮ್ಮ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು. ನಂತರ ಬೆಲ್ಜಿಯಂನ ನೆಮ್ಯೂರ್ ವಿಶ್ವವಿದ್ಯಾಲಯದಿಂದ ನ್ಯಾನೊಸೈನ್ಸ್‌ನಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದರು.

ಡಾ. ಪ್ರವೀಣ್ ಮಾರ್ಟಿಸ್ ರವರು ಇದುವರೆಗೆ ಹಲವಾರು ನಾಯಕತ್ವದ ಪಾತ್ರಗಳನ್ನು ಅಲಂಕರಿಸಿದ್ದಾರೆ. ಅದರಲ್ಲಿ ಬೆಂಗಳೂರಿನ ಸಂತ ಜೋಸೆಫ್ಸ್ ಸಂಧ್ಯಾ ಕಾಲೇಜಿನಲ್ಲಿ ಕರೆಸ್ಪಾಂಡೆಂಟ್ ಮತ್ತು ವಿದ್ಯಾರ್ಥಿ ಸಲಹೆಗಾರರಾಗಿ, ಸಂತ ಜೋಸೆಫ್ ಕಾಲೇಜಿನಲ್ಲಿ (ಪ್ರಸ್ತುತ ವಿಶ್ವವಿದ್ಯಾನಿಲಯ) ರಸಾಯನಶಾಸ್ತ್ರದ ಪ್ರಾಧ್ಯಾಪಕರಾಗಿ, ಸಂತ ಜೋಸೆಫ್ಸ್‌ನಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನೆಯ ನಿರ್ದೇಶಕರಾಗಿ, ಕಾಲೇಜಿನ ರೆಕ್ಟರ್ ಮತ್ತು ಪ್ರಾಂಶುಪಾಲರಾಗಿ, ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಡಿಡಿಯು ಕೌಶಲ್ ಕೇಂದ್ರದ ನಿರ್ದೇಶಕರಾಗಿ ಮತ್ತು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿರುತ್ತಾರೆ.

ವಿವಿಧ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾಯಕತ್ವದ ಸ್ಥಾನಗಳಲ್ಲಿರುವುದರ ಜೊತೆಗೆ, ಪ್ರವೀಣ್ ಉತ್ಕೃಷ್ಟ ಸಂಶೋಧಕರಾಗಿದ್ದಾರೆ. ಅಲ್ಲದೆ ಪ್ರಖ್ಯಾತ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಶೋಧನಾ ನಿಯತಕಾಲಿಕೆಗಳಲ್ಲಿ ಹಲವಾರು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ಅವರು ಭಾರತದಲ್ಲಿನ ಸ್ವಾಯತ್ತ ಕಾಲೇಜುಗಳ ಮೌಲ್ಯಮಾಪನಕ್ಕಾಗಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಕೌನ್ಸಿಲ್ (NAAC) ನಿಂದ ಅನುಮೋದಿತ ಮೌಲ್ಯಮಾಪಕರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು