ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಚೇರಿ ಉದ್ಘಾಟನಾ ಸಮಾರಂಭದ ದಿನದಂದು ಆಕಸ್ಮಿಕವಾಗಿ ಮೃತಪಟ್ಟ ನಾಲ್ಕು ಬಿಜೆಪಿ ಕಾರ್ಯಕರ್ತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ ದೇಣಿಗೆಯನ್ನು ಶಾಸಕರು ಕಚೇರಿಯಲ್ಲಿ ನೀಡಿದರು ಕುಟುಂಬಕ್ಕೆ ಸಾಂತ್ವನ ಹೇಳಿದರು.
ಬಿಜೆಪಿಯ ಕುಟುಂಬದ ಸದಸ್ಯರಾಗಿದ್ದುಕೊಂಡು, ಆಕಸ್ಮಿಕವಾಗಿ ಜೀವಕಳೆದದ್ದು ನಮಗೆ ಆಘಾತವನ್ನುಂಟು ಮಾಡಿತ್ತು, ಹಾಗಾಗಿ ಇವರ ಕುಟುಂಬಕ್ಕೆ ಪಕ್ಷದ ವತಿಯಿಂದ ಸಹಾಯವಾಗುವ ನಿಟ್ಟಿನಲ್ಲಿ ಕಚೇರಿಯ ಉದ್ಘಾಟನಾ ದಿನದಂದು ಸೇವಾ ಉತ್ಸವ ಎಂಬ ವಿನೂತನ ಕಾರ್ಯಕ್ರಮದ ಮೂಲಕ ನಾಲ್ಕು ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ ದೇಣಿಗೆ ನೀಡಲಾಗಿದೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಈ ವಿಜಯೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿ ಸೇವಾ ಉತ್ಸವ ಎಂಬ ಕಾರ್ಯಕ್ರಮದ ಮೂಲಕ ಕಾರ್ಯಕರ್ತರ ಕುಟುಂಬಕ್ಕೆ ನೆರವಾಗುವ ಕಾರ್ಯಕ್ರಮ ಮಾಡಿದ್ದೇವೆ.
ಇತ್ತೀಚೆಗೆ ನಿಧನರಾದ ಬಿಜೆಪಿ ಕಾರ್ಯಕರ್ತರಾದ ಜನಾರ್ಧನ ಬಾರಿಂಜೆ, ಪ್ರವೀಣ್ ನಾಯಕ್, ನಿತಿನ್ ಯಾನೆ ರೂಪೇಶ್ ಪೂಜಾರಿ, ವಿಜಿತ್ ಗುರುವಾಯನಕೆರೆ ಅವರ ಕುಟುಂಬಕ್ಕೆ ನೆರವು ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ದೇವಪ್ಪ ಪೂಜಾರಿ, ದೇವದಾಸ್ ಶೆಟ್ಟಿ , ರವೀಶ್ ಶೆಟ್ಟಿ ಕರ್ಕಳ, ಸುಲೋಚನ ಜಿ.ಕೆ.ಭಟ್, ಮಾದವ ಮಾವೆ, ಸುದರ್ಶನ ಬಜ,ಪುರುಷೋತ್ತಮ ಶೆಟ್ಟಿ, ಗಣೇಶ್ ರೈ ಮಾಣಿ, ಸತೀಶ್ ಪೂಜಾರಿ, ವಾಮನ ಆಚಾರ್ಯ, ಅಜಿತ್ ಶೆಟ್ಟಿ, ರಶ್ಮಿತ್ ಶೆಟ್ಟಿ ಕೈತ್ರೋಡಿ, ಯಶೋಧರ ಕರ್ಬೆಟ್ಟು, ಅಭಿಷೇಕ್ ಶೆಟ್ಟಿ ಗೋಳ್ತಮಜಲು, ಅಭಿಷೇಕ್ ಸುವರ್ಣ, ಸಂತೋಷ್ ಕುಲಾಲ್, ಕಾರ್ತಿಕ್ ಬಲ್ಲಾಳ್,ಮಹೇಶ್ ಶೆಟ್ಟಿ ಜುಮಾದಿಗುಡ್ಡೆ, ರಾಜಾರಾಂ ನಾಯಕ್, ಜಯಲಕ್ಮೀ ಕಾವಳಮೂಡೂರು, ರಾಜ್ ಗೋಪಾಲ ಪ್ರಭು, ಪ್ರಶಾಂತ್ ಕೆಂಪುಗುಡ್ಡೆ, ಪ್ರಕಾಶ್ ಅಂಚನ್, ಹರೀಶ್ ಪ್ರಭು, ರವಿ ಅಮ್ಮುಂಜೆ ಮತ್ತಿತರರು ಉಪಸ್ಥಿತರಿದ್ದರು.
ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…
ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…
ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…
ಹಾಸನ ವಿಡಿಯೋ ಪೆನ್ಡ್ರೈವ್ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…
ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ ಗುಡುಗು…