ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ಬಂಟ್ವಾಳ ತಾಲೂಕು ಪುಂಜಾಲಕಟ್ಟೆ ವಲಯದ ಸಾಧನಾ ಸಮಾವೇಶವು ಕಕ್ಕೆಪದವು ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಹರೀoದ್ರ ಪೈ ಯವರು ಉದ್ಘಾಟಿಸಿ ದೇವರ ಮೇಲೆ ನಂಬಿಕೆ ಇಟ್ಟು ಯಾವುದೇ ಕೆಲಸವನ್ನು ಮಾಡಿದ್ದಲ್ಲಿ ಪ್ರತಿ ಫಲವನ್ನು ದೇವರು ಕೊಡುತ್ತಾನೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ.ಸತ್ಯಶಂಕರ್ ಶೆಟ್ಟಿಯವರು ಮಾತನಾಡಿ, ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯಿಂದ ಗ್ರಾಮಗಳ ಅಭಿವೃದ್ಧಿ ಆಗಿದೆ. ಯಾವುದೇ ಸರಕಾರವು ಮಾಡಲಾಗದ ಕೆಲಸ ಕಾರ್ಯಗಳನ್ನು ಗ್ರಾಮಾಭಿವೃದ್ದಿ ಯೋಜನೆಯ ಮುಖಾಂತರ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವುದು ಶ್ಲಾಘನೀಯ ಎಂದು ಅಭಿನಂದನೆ ಸಲ್ಲಿಸಿದರು.
ಅತಿಥಿಯಾಗಿ ಭಾಗವಹಿಸಿದ ವೇಣೂರು ಪೊಲೀಸ್ ಠಾಣ ಆರಕ್ಷಕರಾದ ಪ್ರಶಾಂತ್ ಕುಮಾರ್ ರವರು ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿಯವರ ಕನಸು ಗ್ರಾಮಭಿವೃದ್ದಿ ಯೋಜನೆಯ ಮೂಲಕ ಸಾಕಾರಗೊಂಡಿದೆ.. ಯೋಜನೆಯ ಅರ್ಥ ಪೂರ್ಣ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಂತಾಗಿದೆ… ಬಡತನ ನಿವಾರಣೆ ಆಗಿದೆ. ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಜಯಾನಂದ ಪಿ. ಯವರು ಸಂಘಗಳನ್ನು ಬಲಪಡಿಸುವ ನಿಯಮಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಉತ್ತಮ ಸಂಘಗಳನ್ನು ಹಾಗೂ ಸ್ವ ಉದ್ಯೋಗ ಮಾಡಿ ಅಭಿವೃದ್ಧಿ ಹೊಂದಿರುವ ಕುಟುಂಬಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಪಂಚಾಯತ್ ಅಧ್ಯಕ್ಷರಾದ ಸುರೇಶ ಮೈರಾ ರವರು ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ನಮ್ಮ ಗ್ರಾಮವೇ ಅಭಿವೃಧ್ಧಿ ಆಗಿದೆ ಎಂದರು.
ಈ ಸಂಧರ್ಭದಲ್ಲಿ ಕಕ್ಯಬೀಡು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪಂಚಾಯತ್ ಅಧ್ಯಕ್ಷರಾದ ಜಯಲಕ್ಷ್ಮಿ, ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ್ ಸಾಲಿಯಾನ್ ಬಿತ್ತ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಚಿದಾನಂದ ರೈ ಕಕ್ಯ ಯವರು ವಹಿಸಿಕೊಂಡು ಶುಭ ಹಾರೈಸಿದರು. ಪುಂಜಾಲಕಟ್ಟೆ ವಲಯದ ಮೇಲ್ವಿಚಾರಕಿ ಅಶ್ವಿನಿ ಸ್ವಾಗತಿಸಿದರು, ಪಿಲಾತಬೆಟ್ಟು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಅಮೃತಾ ಎಸ್ ವರದಿ ಮಂಡಿಸಿದರು. ಉಳಿ ಸೇವಾಪ್ರತಿನಿಧಿ ಶೇಖರ್ ವಂದಿಸಿದರು. ರಾಜಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಉಳಿ ಗೋಪಾಲ ಕೃಷ್ಣಾ ಭಜನಾ ತಂಡದ ಮಕ್ಕಳಿಂದ ಕುಣಿತ ಭಜನಾ ಕಾರ್ಯಕ್ರಮ ಹಾಗೂ ಸ್ವ ಸಹಾಯ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.