News Karnataka Kannada
Monday, April 29 2024
ಮಂಗಳೂರು

ಉಜಿರೆ ಎಸ್.‌ಡಿ.ಎಂ. ಕಾಲೇಜಿನಲ್ಲಿ ಸರಸ್ವತಿ ಪೂಜಾ ಸಂಭ್ರಮ

Saraswati Puja celebrations at Ujire SDM College
Photo Credit : News Kannada

ಉಜಿರೆ, ಅ.20: ನವರಾತ್ರಿ ಹಬ್ಬದ ಆರನೇ ದಿನವಾದ ಇಂದು (ಅ.20) ಉಜಿರೆ ಎಸ್‌.ಡಿ.ಎಂ. ಕಾಲೇಜಿನ ಗ್ರಂಥಾಲಯದಲ್ಲಿ ಸರಸ್ವತಿ ಪೂಜೆ ನಡೆಯಿತು. ಶ್ರಾವಣ ಮಾಸದ ಶುಕ್ರವಾರದ ಪುಣ್ಯ ಪರ್ವ ಕಾಲದಲ್ಲಿ ವರ್ಷಂಪ್ರತಿಯಂತೆ ಅರ್ಚಕ ಚಂದ್ರಶೇಖರ್‌ ಬಿ. ಅವರು ಪೂಜೆ ನೆರವೇರಿಸಿದರು.

ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ವರ್ಗದವರು ಶ್ಲೋಕ, ಭಕ್ತಿಗೀತೆಗಳ ಮೂಲಕ ಜ್ಞಾನ, ಕಲಿಕೆ, ಬುದ್ಧಿವಂತಿಕೆ ಮತ್ತು ಸಂಗೀತದ ದೇವತೆಯಾದ ಶಾರದಾ ದೇವಿಯನ್ನು ಸ್ತುತಿಸಿದರು. ಗ್ರಂಥಾಲಯದ ಮುಂಭಾಗದಲ್ಲಿ ಬಾಳೆಗಿಡಗಳನ್ನು ಕಟ್ಟಿ ಒಳಾಂಗಣ, ಹೊರಾಂಗಣಗಳನ್ನು ತಳಿರುತೋರಣಗಳಿಂದ ಅಲಂಕರಿಸಲಾಗಿತ್ತು. ಕಾಲೇಜು ಹಬ್ಬದ ವಾತಾವರಣದಿಂದ ತುಂಬಿತ್ತು.

ಪೂಜೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ಉಪ ಪ್ರಾಂಶುಪಾಲ ಪ್ರೊ. ಶಶಿಶೇಖರ ಎನ್. ಕಾಕತ್ಕರ್, ಆಡಳಿತ ಕುಲಸಚಿವೆ ಡಾ. ಶಲೀಪ್ ಎ.ಪಿ., ಪರೀಕ್ಷಾಂಗ ಕುಲಸಚಿವೆ ಪ್ರೊ. ನಂದಾಕುಮಾರಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಗ್ರಂಥಪಾಲಕ ಯೋಗೇಶ್ ಎಚ್.ಇ. ಮತ್ತು ಸಿಬ್ಬಂದಿ, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಸಾದ ವಿತರಣೆ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು