ಬಂಟ್ವಾಳ: ಶಾಲಾ ಬಾಲಕಿಯ ಕೈ ಹಿಡಿದು ಎಳೆದ ಆರೋಪಿಯೋರ್ವನ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು,ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸರಪಾಡಿ ಗ್ರಾಮದ ಕುದ್ಕುಂಜ ನಿವಾಸಿ ಸುಕೇಶ್ ಯಾನೆ ಸಿಕೇಶ ಎಂಬಾತನ ಆರೋಪಿಯಾಗಿದ್ದು,ಸದ್ಯ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾನೆ.
ಬಾಲಕಿ ಒಬ್ಬಳೇ ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿ ಸುಕೇಶ್ ಗೌಡ ಎಂಬಾತ ಬಾಲಕಿಯ ಹಿಂದಿನಿಂದ ಹೋಗಿ ಬಾಲಕಿಯ ಕೈ ಹಿಡಿದು ಎಳೆದಿದ್ದಾನೆ. ಈತನ ದುರ್ಬುದ್ದಿಯ ಬಗ್ಗೆ ಮೊದಲೇ ಅರಿತುಕೊಂಡಿದ್ದ ಅಲ್ಲಿನ ರಿಕ್ಷಾಚಾಲಕರು ಸಂಶಯಗೊಂಡು , ಈತ ಬಾಲಕಿಯ ಬೆನ್ನ ಹಿಂದೆ ಹೋಗುವುದನ್ನು ನೋಡುತ್ತಿದ್ದರು. ಈತನ ಹಿಂಬಾಳಿಸಿಕೊಂಡು ಹೋದ ಚಾಲಕರು ಬಾಲಕಿಯ ಕೈ ಹಿಡಿದ ಕೂಡಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಈತನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬಂಧಿಸಿದ್ದಾರೆ.
ಖತರ್ನಕ್ ಆರೋಪಿ
ವಿಪರೀತ ಕುಡಿತದ ಚಟಕ್ಕೆ ಬಿದ್ದಿರುವ ಸುಕೇಶ್ ಈ ಹಿಂದೆ ಎರಡು ಬಾರಿ ಇಂತಹುದೇ ಹಲ್ಕಾ ಕೆಲಸ ಮಾಡಿ ಸಿಕ್ಕಿಹಾಕಿಕೊಂಡಿದ್ದ ಎಂದು ಹೇಳಲಾಗಿದೆ. ಜೊತೆಗೆ ಸಾರ್ವಜನಿಕರಿಂದ ಗೂಸಾ ಕೂಡ ಪಡೆದುಕೊಂಡಿದ್ದ. ಆದರೂ ಈತನ ಚಾಳಿ ಕಡಿಮೆಯಾಗಿಲ್ಲ. ಮತ್ತೆ ಅದೇ ಚಾಳಿಯನ್ನು ಮುಂದುವರಿಸಿದ ಆರೋಪಿಯ ಬಗ್ಗೆ ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿದ್ದಾರೆ.
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…