News Karnataka Kannada
Saturday, April 27 2024
ಮಂಗಳೂರು

ಎಸ್.ಡಿ.ಎಂ ವಿಜ್ಞಾನ ವಿದ್ಯಾರ್ಥಿಗಳು ಐಡಿಇಎ ಪ್ರಯೋಗಾಲಯಕ್ಕೆ ಭೇಟಿ

SDM Science Students Visit IDEA Laboratory
Photo Credit : News Kannada

ಉಜಿರೆ: ಶ್ರೀ ಧ.ಮಂ. ಕಾಲೇಜಿನ ವಿಜ್ಞಾನ ವಿಭಾಗದ ಇಪ್ಪತ್ತಾರು ವಿದ್ಯಾರ್ಥಿಗಳು ವಾಮಂಜೂರು ಸೈಂಟ್‌ ಜೋಸೆಫ್‌ ತಾಂತ್ರಿಕ ಕಾಲೇಜಿನ ಐಡಿಇಎ ಪ್ರಯೋಗಾಲಯಕ್ಕೆ ಇತ್ತೀಚಿಗೆ ಭೇಟಿ ನೀಡಿದರು.

ವಿದ್ಯಾರ್ಥಿಗಳಿಗೆ 3ಡಿ ಪ್ರಿಂಟಿಂಗ್, ಲೇಝರ್‌ ಡಿಸೈನ್ ಪ್ರಿಂಟಿಂಗ್, ಪಿಸಿಬಿ ಪ್ರಿಂಟಿಂಗ್, ವುಡ್‌ಡಿಸೈನ್ ಪ್ರಿಂಟಿಂಗ್ ಮುಂತಾದ ವಿಷಯಗಳ ಬಗ್ಗೆ ವಿವರಣೆ ನೀಡಲಾಯಿತು. ಸ್ವತಃ ವಿದ್ಯಾರ್ಥಿಗಳೇ ಪ್ರಯೋಗಗಳನ್ನು ಮಾಡುವ ಮೂಲಕ ವೃತ್ತಿ ಕೌಶಲ್ಯಗಳನ್ನು ಹೆಚ್ಚಿಸಿಕೊಂಡರು. ಇಂತಹ ವಿನೂತನ ಆವಿಷ್ಕಾರಗಳಿಗೆ ಪೂರಕ ಮಾಹಿತಿಯನ್ನು ನೀಡುವ ಪ್ರಯೋಗಾಲಯಗಳು ಕರ್ನಾಟಕದಲ್ಲಿ ಕೇವಲ ನಾಲ್ಕು ತಾಂತ್ರಿಕ ಕಾಲೇಜುಗಳಲ್ಲಿವೆ.

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ ಹಾಗೂ ಸೈಂಟ್‌ ಜೋಸೆಫ್‌ ತಾಂತ್ರಿಕ ಕಾಲೇಜು (ಸ್ವಾಯತ್ತ) ವಾಮಂಜೂರು ಸಂಸ್ಥೆಗಳ ನಡುವಿನ ಒಡಂಬಡಿಕೆಯ ಪ್ರಕಾರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್.ಎನ್‌ ಕಾಕತ್ಕರ್, ಗಣಿತಶಾಸ್ತ್ರ ವಿಭಾಗದ ಪ್ರೊ. ಗಣೇಶ್ ನಾಯಕ್‌ ಉಪಸ್ಥಿತಿಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಸೈಂಟ್‌ ಜೋಸೆಫ್‌ ತಾಂತ್ರಿಕ ಕಾಲೇಜಿನ ಉಪಪ್ರಾಚರ‍್ಯ ಪ್ರೊ. ಚಿಪ್ಪಾರು ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಎಸ್.ಡಿ.ಎಂ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಪ್ರೊ. ಗಣೇಶ್ ನಾಯಕ್‌ ಧನ್ಯವಾದ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು