ಬಂಟ್ವಾಳ: ನಿಮ್ಮನಿಮ್ಮ ಬೂತ್ ಗಳಲ್ಲಿ ಮತದಾರರನ್ನು ಭೇಟಿ ಮಾಡಿ, ಪ್ರತಿ ಮತಗಳನ್ನು ಬಿಜೆಪಿ ಪಕ್ಷಕ್ಕೆ ಸಿಗುವಂತೆ ಮಾಡಿ ಹಾಗಾದರೆ ಗೆಲುವು ನಿಶ್ಚಿತ ಎಂದು ಶಾಸಕ ರಾಜೇಶ್ ನಾಯ್ಕ್ ಅವರು ಕಾರ್ಯಕರ್ತರಿಗೆ ತಿಳಿಸಿದರು.
ಅವರು ಕರಿಯಂಗಳ ಗ್ರಾಮದಲ್ಲಿ ಬೂತ್ ಬೂತ್ ಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಬಳಿಕ ಕಾರ್ಯಕರ್ತರ ಜೊತೆಗೆ ಮಾತನಾಡಿದರು. ಚುನಾವಣೆ ನಡೆಯವವರೆಗೆ ಪ್ರತಿ ಕ್ಷಣವನ್ನು ಬಿಜೆಪಿಯ ಗೆಲುವಿಗಾಗಿ ಮೀಸಲಿಡಿ, ಮುಂದಿನ ಐದು ವರ್ಷಗಳ ಕಾಲ ಬಿಜೆಪಿ ಪಕ್ಷ ಕಾರ್ಯಕರ್ತರಿಗಾಗಿ ಶ್ರಮಿಸುತ್ತದೆ ಎಂದು ಭರವಸೆ ನೀಡಿದರು.
ಭ್ರಷ್ಟಾಚಾರದಲ್ಲಿ ಜನರ ಹಣವನ್ನು ಸುಳಿಗೆ ಮಾಡಿದ ಕಾಂಗ್ರೆಸ್ ಗೆ ಸೋಲಿನ ಭೀತಿಯಿಂದ ಇಲ್ಲಸಲ್ಲದ ಆರೋಪದಲ್ಲಿ ತೊಡಗಿದೆ. ಬಿಜೆಪಿಯ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಪಾರದರ್ಶಕವಾಗಿದ್ದು, ಕಾರ್ಯಕರ್ತರು ಮನೆಮನೆಗೆ ಹೋಗಿ ನೆನಪಿಸುವ ಕಾರ್ಯ ನಡೆಯಬೇಕು ಎಂದು ತಿಳಿಸಿದರು.
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದ್ದು,ಕಾರ್ಯಕರ್ತರು ಗೌರವದಿಂದ ಮತಕೇಳುಬಹುದು. ಕಾರ್ಯಕರ್ತರು ಜೊತೆಯಾಗಿ ಅಭಿವೃದ್ಧಿಯನ್ನು ಮುಂದಿಟ್ಟಕೊಂಡು ಮತಯಾಚನೆ ಮಾಡಿ ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಬಿಜೆಪಿ ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ಮಾತನಾಡಿ, ಶಾಂತಿಯ ಬಂಟ್ವಾಳವನ್ನು ಮುಂದುವರಿಸಿಕೊಂಡು ಹೋಗುವುದರ ಜೊತೆಗೆ ಅಭಿವೃದ್ಧಿಗಾಗಿ ರಾಜೇಶ್ ನಾಯ್ಕ್ ಅವರನ್ನು ಈ ಬಾರಿಯೂ ಅತ್ಯಂತ ಹೆಚ್ಚಿನ ಮತಗಳಿಂದ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲಾ ಸಮಿತಿ ಕಾರ್ಯಕಾರಿಣಿ ಸದಸ್ಯ ವೆಂಕಟೇಶ್ ನಾವಡ, ಗ್ರಾ.ಪಂ.ಸದಸ್ಯ ಲೋಕೇಶ್ ಭರಣಿ, ಚಂದ್ರಾವತಿ ಪೊಳಲಿ, ಪ್ರಮುಖರಾದ ಸುಕೇಶ್ ಚೌಟ, ಬಂಟ್ವಾಳ ಯುವಮೋರ್ಚಾದ ಅದ್ಯಕ್ಷ ಕಿಶೋರ್ ಪಲ್ಲಿಪಾಡಿ, ತಾ.ಪಂ.ಮಾಜಿ ಸದಸ್ಯ ಯಶವಂತ ಪೊಳಲಿ ಮತ್ತಿತರರು ಉಪಸ್ಥಿತರಿದ್ದರು.