ಮೂಡುಬಿದಿರೆ: ನಾಲ್ಕು ಕಂದಾಯ ಜಿಲ್ಲೆಗಳನ್ನೋಳಗೊಂಡ ರೋಟರಿ ಜಿಲ್ಲೆ 3181 ಯು 2022-2023 ನೇ ಸಾಲಿನಲ್ಲಿ ಒಟ್ಟು 4.12ಕೋಟಿ ವೆಚ್ಚದಲ್ಲಿ ವಿವಿಧ ಸೇವಾ ಕಾರ್ಯಗಳನ್ನು ನಡೆಸಿದೆ ಎಂದು ರೋಟರಿ ಜಿಲ್ಲಾ ರಾಜ್ಯಪಾಲ ಪ್ರಕಾಶ್ ಕಾರಂತ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪ್ರಾಥಮಿಕ ಶಿಕ್ಷಣದ ಮೂಲಭೂತ ಸೌಕರ್ಯಗಳನ್ನು ಒದಗಿಸಲು 1 ಕೋಟಿ ನೀರು ಮತ್ತು ನೈರ್ಮಲ್ಯ ಉದ್ದೇಶಗಳಿಗಾಗಿ 13 ಲಕ್ಷ
ಪರಿಸರ ಸಂಬಂಧಿ ಕೆಲಸಗಳಿಗಾಗಿ 52 ಲಕ್ಷ, ಇತರ ಸಮಾಜಮುಖಿ ಕೆಲಸಗಳಿಗಾಗಿ 65 ಲಕ್ಷ, ತಾಯಿ ಮತ್ತು ಆರೋಗ್ಯ ಕಾರ್ಯಕ್ರಮಗಳಿಗೆ 1 ಲಕ್ಷ ವಿನಿಯೋಗಿಸಲಾಗಿದೆ. ವಿವಿಧ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರಗಳು, ರಕ್ತನಿಧಿ ಕೇಂದ್ರಗಳನ್ನು ತೆರೆಯಲಾಗಿದೆ. ಮಂಗಳೂರಿನಲ್ಲಿ ಸ್ತನ ಹಾಲಿನ ಕೇಂದ್ರವನ್ನು ತೆರೆಯಲಾಗಿದೆ ಎಂದರು. ಜಿಲ್ಲಾ ವ್ಯಾಪ್ತಿಯಲ್ಲಿ 87 ಕ್ಲಬ್ ಗಳು ಸಕ್ರಿಯವಾಗಿದ್ದು ಆಯಾ ಪ್ರದೇಶದ ಅವಶ್ಯಕತೆಗಳಿಗೆ ಸ್ಪಂದಿಸುತ್ತಿದೆ ಎಂದರು.
ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ಅಧ್ಯಕ್ಷ ಪ್ರವೀಣ್ ಪಿರೇರಾ ಮಾತನಾಡಿ, ಕ್ಲಬ್ ಈ ಸಾಲಿನಲ್ಲಿ ಕೋಡಂಗಲ್ಲಿನಲ್ಲಿ ರೋಟರಿ ವನ, ವಿವಿಧ ಬಸ್ಸು ತಂಗುದಾಣಗಳ ನವೀಕರಣ, ಟೆಂಪಲ್ ಟೌನ್ ಪಾರ್ಕ್ನಲ್ಲಿ ಸುರಕ್ಷತೆಯ ದೃಷ್ಠಿಯಿಂದ ಸಿಸಿ ಕ್ಯಾಮರಗಳನ್ನು ಅಳವಡಿಸಿದೆ ಎಂದರು.
ರೋಟರಿ ಜಿಲ್ಲಾ ಕಾರ್ಯದರ್ಶಿ ನಾರಾಯಣ ಹೆಗ್ಡೆ, ಉಪರಾಜ್ಯಪಾಲ ಎಂ. ವಿ ಭಟ್, ಝೋನಲ್ ಲೆಪ್ಟಿನೆಂಟ್ ವಿನ್ಸೆಂಟ್ ಡಿಕೋಸ್ತ, ಟೆಂಪಲ್ ಟೌನ್ ಕಾರ್ಯದರ್ಶಿ ಡಾ.ಅಮರದೀಪ್ ಉಪಸ್ಥಿತರಿದ್ದರು.
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…