News Karnataka Kannada
Saturday, April 27 2024
ಮಂಗಳೂರು

ಸುಳ್ಯದಲ್ಲಿ ಸೇವಾಭಾರತಿ ಹೆಲ್ಪ್ ಲೈನ್ ಆಂಬ್ಯುಲೆನ್ಸ್ ಲೋಕಾರ್ಪಣೆ

SevaBharathi Helpline Ambulance Launched In Sullia
Photo Credit : News Kannada

ಸುಳ್ಯ: ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಇದರ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಇಂದು ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಲಿದೆ.

ಮಾಜಿ ಸಚಿವ ಎಸ್.ಅಂಗಾರ ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವುದೇ ಸೇವೆ ಮಾಡುವುದು ಬದುಕಿನ ಪುಣ್ಯದ ಕಾರ್ಯ. ಇಂದು ಹಲವು ಎನ್.ಜಿ.ಒ.ಗಳು ಕೂಡ ಸೇವೆಯನ್ನು ಮಾಡುತ್ತದೆ. ಆದರೆ ಅವು ಅಪೇಕ್ಷೆಯನ್ನು ಇಟ್ಟುಕೊಂಡು ಸೇವೆ ಮಾಡುತ್ತದೆ. ಪ್ರತಿಫಲಾಪೇಕ್ಷೆ ಇಲ್ಲದ ಸೇವೆ ನಿಜವಾದ ಸೇವೆ ಎಂದರು. ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ನ ಸೇವೆ ಇದೇ ರೀತಿ ಮುಂದುವರಿಯಲಿ ಎಂದು ಹಾರೈಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಶುಭಹಾರೈಸಿದರು. ಮಣಿಪಾಲ ಎಂಐಟಿ ಪ್ರಾಚಾರ್ಯ ಡಾ.ನಾರಾಯಣ ಶೆಣೈ ಅವರು ಪ್ರಮುಖ ಭಾಷಣ ನೆರವೇರಿಸಿದರು.

ಸುಳ್ಯ ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ., ಸುಳ್ಯದ ದಿ.ಪುಟ್ಟಪ್ಪ ಜೋಶಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಸುಧಾಕರ ಕಾಮತ್, ಸುಳ್ಯ ಶ್ರೀ ಭಾಲಾವಲೀಕರ‍್ರಾಜಾಪುರ ಸಾರಸ್ವತ ಸಮಾಜಯ ಅಧ್ಯಕ್ಷ ಹೇಮಂತ್ ಕುಮರ್ ಕಂದಡ್ಕ, ಸಂಘ ಸಂಚಾಲಕ ಚಂದ್ರಶೇಖರ ತಳೂರು ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು