ಸುಳ್ಯ: ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಇದರ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಇಂದು ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಲಿದೆ.
ಮಾಜಿ ಸಚಿವ ಎಸ್.ಅಂಗಾರ ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವುದೇ ಸೇವೆ ಮಾಡುವುದು ಬದುಕಿನ ಪುಣ್ಯದ ಕಾರ್ಯ. ಇಂದು ಹಲವು ಎನ್.ಜಿ.ಒ.ಗಳು ಕೂಡ ಸೇವೆಯನ್ನು ಮಾಡುತ್ತದೆ. ಆದರೆ ಅವು ಅಪೇಕ್ಷೆಯನ್ನು ಇಟ್ಟುಕೊಂಡು ಸೇವೆ ಮಾಡುತ್ತದೆ. ಪ್ರತಿಫಲಾಪೇಕ್ಷೆ ಇಲ್ಲದ ಸೇವೆ ನಿಜವಾದ ಸೇವೆ ಎಂದರು. ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ನ ಸೇವೆ ಇದೇ ರೀತಿ ಮುಂದುವರಿಯಲಿ ಎಂದು ಹಾರೈಸಿದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಶುಭಹಾರೈಸಿದರು. ಮಣಿಪಾಲ ಎಂಐಟಿ ಪ್ರಾಚಾರ್ಯ ಡಾ.ನಾರಾಯಣ ಶೆಣೈ ಅವರು ಪ್ರಮುಖ ಭಾಷಣ ನೆರವೇರಿಸಿದರು.
ಸುಳ್ಯ ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ., ಸುಳ್ಯದ ದಿ.ಪುಟ್ಟಪ್ಪ ಜೋಶಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಸುಧಾಕರ ಕಾಮತ್, ಸುಳ್ಯ ಶ್ರೀ ಭಾಲಾವಲೀಕರ್ರಾಜಾಪುರ ಸಾರಸ್ವತ ಸಮಾಜಯ ಅಧ್ಯಕ್ಷ ಹೇಮಂತ್ ಕುಮರ್ ಕಂದಡ್ಕ, ಸಂಘ ಸಂಚಾಲಕ ಚಂದ್ರಶೇಖರ ತಳೂರು ಮತ್ತಿತರರು ಉಪಸ್ಥಿತರಿದ್ದರು.
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…
ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…
ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.