ಮಂಗಳೂರು: ಲೋಕ ಸುಭಿಕ್ಷೆ ಹಾಗೂ ಕಲ್ಯಾಣಾರ್ಥ, ಭೂಮಿಗೆ ಮಳೆಯ ಕೃಪೆಗಾಗಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶತ ಸೀಯಾಳಾಭಿಷೇಕ, ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.
ಕರಾವಳಿ ಭಾಗದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಜಲಕ್ಷಾಮದಿಂದ ಕರಾವಳಿಯ ಬಹುತೇಕ ನದಿಮೂಲ, ಬಾವಿ, ಕೆರೆ, ಬೋರ್ವೆಲ್ ಬತ್ತಿದ್ದು, ಕೃಷಿ ಚಟುವಟಿಕೆಗಳ ಜತೆ ಕುಡಿಯುವ ನೀರಿನ ಕೊರತೆಯಾಗಿದೆ. ಇನ್ನೂ ಮಳೆ ವಿಳಂಬವಾಗುವ ಮುನ್ಸೂಚನೆಯಿದ್ದು, ಶೀಘ್ರ ಮಳೆಯಾಗಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ,ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕ್ಷೇತ್ರದ ಕೋಶಾಧಿಕಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಮಹಿಳಾ ಘಟಕದ ನಾಯಕಿ ಶಾಲೆಟ್ ಪಿಂಟೋ, ಕಾರ್ಪೊರೇಟರ್ಗಳಾದ ಭಾಸ್ಕರ್ ಮೊಯ್ಲಿ, ಶಶಿಧರ ಹೆಗ್ಡೆ, ಮಾಜಿ ಕಾರ್ಪೊರೇಟರ್ಗಳಾದ ಡಿ.ಕೆ.ಅಶೋಕ್, ಅಪ್ಪಿ, ಕಾಂಗ್ರೆಸ್ ಮುಖಂಡರಾದ ಸತೀಶ್ ಪ್ರಭು, ಗೆಜ್ಜೆಗಿರಿ ಕ್ಷೇತ್ರದ ಉಪಾಧ್ಯಕ್ಷ ರವಿ ಚಿಲಿಂಬಿ, ವಕ್ತಾರ ರಾಜೇಂದ್ರ ಚಿಲಿಂಬಿ ಸೇರಿದಂತೆ ಹಲವರು ಇದ್ದರು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…
ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲಾ ಪೊಲೀಸರು…
2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…