News Karnataka Kannada
Sunday, April 28 2024
ಮಂಗಳೂರು

ಲವ್‌ ಜಿಹಾದ್‌, ಗೋಹತ್ಯೆ ವಿರುದ್ಧ ಶೌರ್ಯ ಜಾಗರಣಾ ಯಾತ್ರೆ

Shaurya Jagran Yatra against love jihad, cow slaughter
Photo Credit : Facebook

ಮಂಗಳೂರು: ಉದ್ಯಮಿಗೆ ಚೈತ್ರಾ ಕುಂದಾಪುರ ವಂಚಿಸಿದ ಪ್ರಕರಣಕ್ಕೂ ಬಜರಂಗದಳ ಸಂಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದು ಬಜರಂಗದಳ ಮುಖಂಡ ಶರಣ್‌ ಪಂಪ್‌ವೆಲ್‌ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚೈತ್ರ ಕುಂದಾಪುರ ನಮ್ಮ ಸಂಘಟನೆಯವರಲ್ಲ. ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು. ಇಂತಹ ಕೃತ್ಯಗಳಿಗೆ ನಮ್ಮ ಸಂಘಟನೆ ಆಸ್ಪದ ಕೊಡುವುದಿಲ್ಲ. ಎರಡು ತಿಂಗಳ ಹಿಂದೆಯೇ ನನ್ನ ಈಘಟನೆ ಗಮನಕ್ಕೆ ಬಂದಿತ್ತು. ವಜ್ರದೇಹಿ ಮಠದ ಸ್ವಾಮೀಜಿ ನನ್ನೊಂದಿಗೆ ಈ ವಿಚಾರವನ್ನ ಹಂಚಿಕೊಂಡಿದ್ದರು. ನಿಮ್ಮ ಪಾತ್ರ ಇಲ್ಲವೆಂದ ಮೇಲೇ ತಲೆ ಕೆಡಿಸಿಕೊಳ್ಳ ಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ ಎಂದು ಶರಣ್‌ ಹೇಳಿದರು.

ಶೌರ್ಯ ಯಾತ್ರೆ: ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ಬಜರಂಗದಳ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಸಲಿದೆ ಎಂದು ಶರಣ್‌ ಪಂಪ್‌ವೆಲ್‌ ಇದೇ ವೇಳೆ ತಿಳಿಸಿದರು.

ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಉದ್ದೇಶ ಸೇರಿದಂತೆ ವಿವಿಧ ಉದ್ದೇಶದಿಂದ ರಥಯಾತ್ರೆ ನಡೆಯಲಿದೆ. ಸೆಪ್ಟೆಂಬರ್ 25 ಕ್ಕೆ ಚಿತ್ರದುರ್ಗದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು ಅಕ್ಟೋಬರ್ 10 ರಂದು ಉಡುಪಿಯಲ್ಲಿ ಸಮರೋಪ ನಡೆಯಲಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು