News Karnataka Kannada
Saturday, May 04 2024
ಮಂಗಳೂರು

ಶಿವರಾತ್ರಿ ಪಾದಯಾತ್ರೆ: ಚಾರ್ಮಾಡಿಗೆ ಡಾ.ಡಿ. ವೀರೇಂದ್ರ ಹೆಗ್ಗಡೆ ಭೇಟಿ

Shivaratri padayatra: Dr. D. Meet Veerendra Heggade
Photo Credit : News Kannada

ಚಾರ್ಮಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿ ಅಂಗವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ರಾಜ್ಯದ ನಾನಾ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದು, ಚಾರ್ಮಾಡಿ ಶ್ರೀಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಆಹಾರ ಆಶ್ರಯ ಪಡೆದು ಧರ್ಮಸ್ಥಳಕ್ಕೆ ಮುಂದುವರೆಯುತ್ತಾರೆ.ಇಲ್ಲಿನ ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶುಕ್ರವಾರ ಭೇಟಿ ನೀಡಿ ವೀಕ್ಷಣೆ ನಡೆಸಿ, ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು.

ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ,ಉಜಿರೆ ಎಸ್ ಡಿ ಎಂ ಆಸ್ಪತ್ರೆಯ ಎಂಡಿ ಜನಾರ್ದನ್ ಎಂ, ವೈದ್ಯಾಧಿಕಾರಿ ಡಾ.ದೇವೇಂದ್ರ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸಮಿತಿ ಅಧ್ಯಕ್ಷ ಪ್ರಕಾಶ ಹೊಸಮಠ,ಅರ್ಚಕ ಶ್ರೀನಿವಾಸ ಉಪಾಧ್ಯಾಯ, ಸದಸ್ಯರು,ತಾಪಂ.ಮಾಜಿ ಸದಸ್ಯ ಕೊರಗಪ್ಪ ಗೌಡ,ಮುಂಡಾಜೆ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ಪ್ರಕಾಶ್ ನಾರಾಯಣ್ ರಾವ್, ಮಾಜಿ ನಿರ್ದೇಶಕ ಅನಂತರಾಯ ಚಾರ್ಮಾಡಿ,ಪವನ್ ಕುಮಾರ್, ನಿತಿನ್, ಬೆಂಗಳೂರಿನ ವೈದ್ಯರಾದ ಡಾ.ಪಂಚಾಕ್ಷರಿ, ಡಾ.ಮಂಜುನಾಥ್, ಡಾ.ನಾಗರಾಜ್, ಸಮಾಜಸೇವಕ ಡಾ.ಸಿದ್ಧರಾಮ ಗೌಡ ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು