ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಸಂಜೆ 6ಗಂಟೆಯಿಂದ ಬೆಳಿಗ್ಗೆ 6ಗಂಟೆವರೆಗೆ ಅಂಗಡಿ ಮುಂಗಟ್ಟುಗಳು ಮುಚ್ಚುವ ಕುರಿತಂತೆ ಇದ್ದ ಆದೇಶವನ್ನು ಮಾರ್ಪಾಡು ಮಾಡಲಾಗಿದೆ.
ಶುಕ್ರವಾರದಿಂದ ರಾತ್ರಿ 9ಗಂಟೆವರೆಗೆ ಅಂಗಡಿ ತೆರೆದಿಡಲು ಅವಕಾಶ ಕಲ್ಪಿಸಲಾಗಿದ್ದು, 9ರಿಂದ ಬೆಳಿಗ್ಗೆ 6ಗಂಟೆವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಹೊಸ ಆದೇಶ ತಿಳಿಸಿದ್ದಾರೆ. ಇದೇ ವೇಳೆ ಮದ್ಯದಂಗಡಿಗಳಿಗೂ ಶುಕ್ರವಾರದಿಂದ ತೆರೆದುಕೊಳ್ಳಲಿದ್ದು ಸಂಜೆ 6ಗಂಟೆವರೆಗೆ ವ್ಯಾಪಾರ ನಡೆಸಲು ಅವಕಾಶ ನೀಡಲಾಗಿದೆ.
ಉಳಿದ ನಿರ್ಬಂಧಗಳು ಯಥಾಸ್ಥಿತಿ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ತಿಳಿಸಿದ್ದಾರೆ.