ಕಿನ್ನಿಗೋಳಿ: ನಿರಂತರ ಮಳೆಯಿಂದಾಗಿ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಶುಂಠಿಪಾಡಿಯಲ್ಲಿ ಶಾಂಭವಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಈ ಭಾಗದ ಸುಮಾರು 50 ಕುಟುಂಬಗಳು ಹೊರಜಗತ್ತಿನ ಸಂಪರ್ಕವನ್ನೇ ಕಳೆದುಕೊಳ್ಳುವಂತಾಗಿದೆ.
ಶುಂಠಿಪಾಡಿ ಸದ್ಯ ದ್ವೀಪದಂತಾಗಿದೆ. ಮಳೆಯಿಂದಾಗಿ ಇಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆ ಪ್ರತೀ ವರ್ಷದ ಮಳೆಗಾಲದಲ್ಲಿ ಮುಳುಗುತ್ತಿರುತ್ತದೆ. ಈ ರಸ್ತೆ ಕುದ್ರಿಪದವು ಸಂಪರ್ಕಿಸುತ್ತದೆ. ಅಲ್ಲಿಂದ ಒಂದು ಬದಿಯ ರಸ್ತೆ ಕಿನ್ನಿಗೋಳಿ, ಮತ್ತೊಂದು ಬದಿಯ ರಸ್ತೆ ಕುದ್ರಿಪದವು ಮೂಲಕ ಮುಡಬಿದಿರೆಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಶುಂಠಿಪಾಡಿ/ಕುದ್ರಿ ಪದವು ಸಂಪರ್ಕಿಸುವ ರಸ್ತೆಯ ಎರಡೂ ಬದಿಯಲ್ಲಿ ರಸ್ತೆ ಹದಗೆಟ್ಟಿದ್ದು ಜನ ಓಡಾಡಕ್ಕೆ ತೊಂದರೆ ಉಂಟು ಮಾಡುತ್ತಿದೆ. ರಸ್ತೆಯ ಅರ್ಧಕ್ಕೆ ಡಾಂಬರೀಕರಣ ಮಾಡಿ ಬಿಡಲಾಗಿದೆ. ಇದರಿಂದಾಗಿ ಮಳೆಗಾಲ ಆರಂಭವಾಗುತ್ತಿದ್ದಂತೆಯೇ ರಸ್ತೆ ಕಂಬಳದ ಗದ್ದೆಯಂತಾಗುತ್ತದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಭಾಗದ ಮಕ್ಕಳು ಶಾಲೆಗಳಿಗೆ ತೆರಳಬೇಕಾದರೆ, ಇದೇ ರಸ್ತೆಯನ್ನು ಬಳಸಬೇಕಿದೆ. ಆದರೆ, ಮಳೆಯ ನೀರಿಗೆ ರಸ್ತೆ ಮುಳುಗಡೆಯಾಗುತ್ತಿರುವುದರಿಂದ ಮಕ್ಕಳು ಶಾಲೆಗೆ ಹೋಗುವುದೂ ಅಸಾಧ್ಯವಾಗಿದೆ ಎಂದು ಸ್ಥಳಿಯರಾದ ನವೀನ್ ಅಸಹಾಯಕತೆ ವ್ಯಕ್ತ ಪಡಿಸಿದ್ದಾರೆ.
ಈ ಕುರಿತು ಐಕಳ ಗ್ರಾಮ ಪಂಚಾಯತ್ ಮತ್ತು ಜನಪ್ರತಿನಿಧಿಗಳು ಶುಂಠಿಪಾಡಿ ಗ್ರಾಮಸ್ಥರಿಗೆ ಶಾಶ್ವತ ಪರಿಹಾತ ಕಲ್ಪಿಸಬೇಕೆಂದು ಗ್ರಾಮಸ್ತರು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ…
ವರುಣನ ಅಬ್ಬರಕ್ಕೆ ಕೆರೆಕಟ್ಟೆಗಳು ಭರ್ತಿಯಾಗಿದ್ದು, ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು, ತಾಯೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ…
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀರ್ ಎಂಬುವ ವ್ಯಕ್ತಿ…
ಬಾಂಗ್ಲಾದೇಶದ ಕ್ರಿಕೆಟ್ ತಂಡದ ಹಿರಿಯ ಆಲ್ರೌಂಡರ್ ಶಕಿಬ್ ಅಲ್ ಹಸನ್ ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಥಳಿಸಲು ಮುಂದಾಗಿರುವ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ಅವರಿಗೆ ಏಳು ದಿನದವರೆಗೆ ಅಂದರೆ ಮೇ…
ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ವೊಬ್ಬರು ಕಪ್ಪು ಕನ್ನಡಕ ಹಾಕಿಕೊಂಡು ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ನ ರೋಗಿಗಳ ಬಳಿ ಸ್ಕೂಟಿಯಲ್ಲಿ ಹೋಗಿ ಚಿಕಿತ್ಸೆ…