News Karnataka Kannada
Tuesday, May 07 2024
ಮಂಗಳೂರು

ಸಿದ್ದರಾಮಯ್ಯ ಸರ್ಕಾರ ಭ್ರಷ್ಟರ ಕೂಟ ಎಂದು ಹೇಳಿಕೆ ಕೊಟ್ಟ ನಾಯಕ

Siddaramaiah govt is a bunch of corrupt, says leader
Photo Credit : News Kannada

ಪುತ್ತೂರು: ರಾಜ್ಯದ ಸಿದ್ಧರಾಮಯ್ಯ ಸರಕಾರ ಭ್ರಷ್ಟರ ಕೂಟದ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಅವರು ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಮಾಧ್ಯಮಗಳು, ಸಾಮಾಜಿಕ ಜಾಲತಾಣದ ಮೇಲೂ ದಬ್ಬಾಳಿಕೆ ನಡೆಸಲಾಗುತ್ತಿದೆ. ಪರಿಶಿಷ್ಟ ಜಾತಿ,ಪಂಗಡದವರ ಜಾಗ ಕಬಳಿಸಿದ ಸಚಿವ ಸುಧಾಕರ್ ಅವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ. ಮುಖ್ಯಮಂತ್ರಿಗಳಿಗೆ ಮಾನವಿದ್ದರೆ ಸಚಿವ ಸುಧಾಕರ್‌ ಅವರ ರಾಜೀನಾಮೆ ಪಡೆಯಬೇಕು. ನಮ್ಮ ಸರಕಾರ ಅಧಿಕಾರದಲ್ಲಿದ್ದ ಸಂದರ್ಭ ಸಚಿವರ ವಿರುದ್ಧ ದೂರು ಬಂದಾಗ ರಾಜೀನಾಮೆ ಕೊಡಿಸಿದ್ದೆವು. ಆದರೆ ಈಗಿನ ಸರಕಾರದ ಎಲ್ಲಾ ಮಂತ್ರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ.

ಚೆಲುವರಾಯಸ್ಚಾಮಿ ವಿರುದ್ಧ ಅಧಿಕಾರಿಗಳೇ ಭ್ರಷ್ಟಾಚಾರದ ಆರೋಪ‌ ಹೊರಿಸಿದ್ದಾರೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಕೇವಲ ಮೂರು ತಿಂಗಳಲ್ಲಿ 275 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರಕಾರ ಕಣ್ಣುಮುಚ್ಚಿ ಕುಳಿತಿದೆ. ಬರಗಾಲ ಘೋಷಣೆ ಮಾಡಲೂ ಮೀನಮೇಷ ಎಣಿಸುತ್ತಿದೆ. ಕೇವಲ 164 ತಾಲೂಕಿನಲ್ಲಿ ಬರ ಘೋಷಣೆ ಮಾಡಿದೆ.

ಇಡೀ ರಾಜ್ಯದಲ್ಲಿ ಬರದ ಸ್ಥಿತಿ ಇದೆ. ಆದ ಕಾರಣ ಇಡೀ ರಾಜ್ಯದಲ್ಲಿ ಬರ ಘೋಷಣೆ ಮಾಡಬೇಕು. ಮಲೆನಾಡು,ಕರಾವಳಿ ಭಾರೀ ಮಳೆಯಾಗುವ ಪ್ರದೇಶಗಳು. ಆದರೆ ಈ ಬಾರಿ ಈ ಭಾಗದಲ್ಲೂ ಮಳೆಯಿಲ್ಲ. ನದಿಗಳೆಲ್ಲಾ ಬತ್ತಿ ಹೋಗುತ್ತಿದೆ. ಇಡೀ ರಾಜ್ಯಕ್ಕೆ ಬರ ಘೋಷಣೆ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು