ಮಂಗಳೂರು: ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯದ ಬೆಳ್ಳಿ ಹಬ್ಬ ಹಾಗೂ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವು ಅ.16ರಂದು ನಗರದ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್ನಲ್ಲಿ ನಡೆಯಲಿದೆ ಎಂದು ಸಂಸ್ಥೆ ನಿರ್ದೇಶಕರಾದ ಫಾ.ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಹೇಳಿದರು.
ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಾನ್ಫೆರೆನ್ಸ್ ಹಾಲ್ನಲ್ಲಿ ಫಾದರ್ ಮಲ್ಲರ್ ಎಂಬಿಬಿಎಸ್ ಪದವಿಯ ಬೆಳ್ಳಿ ಹಬ್ಬ ಆಮಂತ್ರಣ ಪ್ರತಿಕೆಯನ್ನು ಅವರು ಬಿಡುಗಡೆಗೊಳಿಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯದ ಬೆಳ್ಳಿಹಬ್ಬದ ಅಂಗವಾಗಿ, ಫಾದರ್ ಮುಲ್ಲರ್ ಸಂಶೋಧನಾ ಕೇಂದ್ರವು ಅ.13,14 ಎರಡು ದಿನಗಳ ಕಾಲ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದ ಅವರು, ಅ.16ರಂದು ಫಾದರ್ ಮಲ್ಲರ್ ಎಂಬಿಬಿಎಸ್ ಪದವಿಯ ಬೆಳ್ಳಿ ಹಬ್ಬದ ಸಂಭ್ರಮ ನಡೆಯಲಿದ್ದು, ಈ ಸಮಾರಂಭದಲ್ಲಿ ಪುತ್ತೂರು ವಿಭಾಗದ ಡಿಎಸ್ಪಿ ಗಾನ.ಪಿ.ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ|ಪೀಟರ್ ಪೌಲ್ ಸಲ್ಡಾನಾ ಅವರು ವಹಿಸಲಿದ್ದಾರೆ ಎಂದು ಸಂಸ್ಥೆ ನಿರ್ದೇಶಕರಾದ ಫಾ.ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಹೇಳಿದರು.
ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೀನ್ ಡಾ| ಆಂಟೋನಿ ಸಿಲ್ವಾನ್ ಡಿಸೋಜಾ ಮಾತನಾಡಿ, ಎರಡು ದಿನಗಳ ನಡೆಯಲಿರುವ ವಸ್ತು ಪ್ರದರ್ಶನದಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಸಂಶೋಧನಾ ಯೋಜನೆಗಳು ಮತ್ತು ಮಾದರಿಗಳ ಪ್ರಸ್ತುತಿಯ ಸ್ಪರ್ಧೆ ಇದೆ. ಆರೋಗ್ಯದ ಬಗ್ಗೆ ಧನಾತ್ಮಕ ಪ್ರಚಾರ, ಆಹಾರ ಮತ್ತು ಪೌಷ್ಟಿಕತೆ, ಬಲ ಮತ್ತು ನೈರ್ಮಲ್ಯ, ವೈದ್ಯಕೀಯ ಉಪಕರಣಗಳು, ಪರಿಸರ ಮಾಲಿನ್ಯ ಈ ವಿಷಯಗಳಲ್ಲಿ ಅತ್ಯುತ್ತಮ ಪ್ರಸ್ತುತಿಗಳಿಗೆ ಬಹುಮಾನಗಳಿವೆ.
ವಿವಿಧ ಶಾಲಾ ಕಾಲೇಜುಗಳ ನೂರ ಮೂವತ್ತೊಂದು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದರು. ಮುಲ್ಲರ್ ಮೆಡಿ ಎಕ್ಸೋ -2023ರಇದರ ಉದ್ಘಾಟನಾ ಸಮಾರಂಭ ಅಕ್ಟೋಬರ್ 13 ರಂದು ನಡೆಯಲಿದ್ದು, ಎನ್ ಐ ಟಿ ಕೆ ಸುರತ್ಕಲ್ ಇದರ ಸಂಶೋಧನಾ ನಿರ್ದೇಶಕರಾದ ಡಾ. ಸತ್ಯಬೋದ್ ಕುಲಕರ್ಣಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸುವ ಸಮಾರಂಭದಲ್ಲಿ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ಫಾ. ರಿಚರ್ಡ್ ಅಲೋಸಿಯಸ್ ಕುವೆಲ್ಲೂ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಫಾದರ್ ಮುಲ್ಲರ್ ಸಂಸ್ಥೆಗಳ ಆಡಳಿತಾಧಿಕಾರಿಗಳು, ಮಂಡಳಿಯ ಸದಸ್ಯರು, ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಫಾದರ್ ಮುಲ್ಲರ್ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ. ಸಂಜೀವ ರೈ ತಿಳಿಸಿದ್ದಾರೆ.
ಫಾದರ್ ಮುಲ್ಲರ್ ಮೆಡಿಕಲ್ಕಾಲೇಜಿನ ಆಡಳಿತಾಧಿಕಾರಿ ರೇ.ಫಾದರ್ ಅಜಿತ್.ಬಿ.ಮನೆಜಸ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ರೇ.ಜಾರ್ಜ್ ಜೀವನ್ ಸ್ವಿಕೇರಾ, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ| ಉದಯ್ ಕುಮಾರ್, ಡಾ.ಅರ್ಚನಾ ಭಟ್ ಮೊದಲಾದವರು ಉಪಸ್ಥಿತಿರಿದ್ದರು.