ಮೂಲ್ಕಿ: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ನಡೆದಿದ್ದು, ಅಕ್ಟೋಬರ್ 26ರ ರಾತ್ರಿ ಈ ಘಟನೆ ನಡೆದಿದ್ದು, ಮೂರು ದಿನಗಳ ಬಳಿಕ ಬೆಳಕಿಗೆ ಬಂದಿದೆ.
ತಾಯಿ ರತ್ನ ಶೆಟ್ಟಿ(62) ಮೃತ ರ್ದುದೈವಿ. ಇನ್ನು ತಾಯಿ ಕತ್ತು ಹಿಸುಕಿ ಕೊಂದ ಮಗ ರವಿರಾಜ್ ಶೆಟ್ಟಿ ಪರಾರಿಯಾಗಿದ್ದ. ನಿನ್ನೆ(ಅ.30) ಸಂಜೆ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಒಪ್ಪದ ಕಾರಣ ಕೊಂದಿದ್ದಾಗಿ ಮಗನೇ ತಪ್ಪೊಪ್ಪಿಕೊಂಡಿದ್ದಾನೆ.
ಇನ್ನು ಆರೋಪಿ ರವಿರಾಜ್ ಶೆಟ್ಟಿ, ತಾಯಿಯನ್ನು ಕೊಂದು ಮನೆಗೆ ಬೀಗ ಜಡಿದು ಪರಾರಿಯಾಗಿದ್ದ. ಮೂರು ದಿನಗಳ ಬಳಿಕ ನೊಣಗಳು ಮುತ್ತಿಕೊಂಡಾಗ ಘಟನೆ ಬೆಳಕಿಗೆ ಬಂದಿತ್ತು. ಕೂಡಲೇ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಸತ್ಯಾಂಶ ಬಾಯ್ಬಿಟ್ಟಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಜಪೆ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.