News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ “ಸಿರಿಚಾವಡಿ ಪುರಸ್ಕಾರ”

"Sirichavadi Puraskaram" at Karnataka Tulu Sahitya Academy
Photo Credit : News Kannada

ಮಂಗಳೂರು: ಸಿರಿಚಾವಡಿ ಪುರಸ್ಕಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಜು.17 ರಂದು ಮಂಗಳೂರಿನ ಉರ್ವಸ್ಟೋರ್‌ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹನೀಯರನ್ನು ಚಾವಡಿ ತಮ್ಮನದಲ್ಲಿ ಗುರುತಿಸುವುದು ಹಾಗೂ ಈ ಸಂದರ್ಭದಲ್ಲಿ ಬಾಲ ಪುರಸ್ಕಾರ, ಯುವ ಸಾಧಕ ಪುರಸ್ಕಾರ, ಮಾಧ್ಯಮ ಪುರಸ್ಕಾರ ಮತ್ತು ಸಂಘಟನಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮದ್ಯಾಹ್ನ 2.30 ಕ್ಕೆ ಉದ್ಘಾಟನಾ ಸಮಾರಂಭವು ನಡೆಯಲಿದ್ದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ  ದಯಾನಂದ ಜಿ ಕತ್ತಲ್‌ಸಾರ್ ರವರು ಅಧ್ಯಕ್ಷತೆ ವಹಿಸಲಿರುವರು. ಕರ್ನಾಟಕ ಸರಕಾರದ ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್ ರವರು ಸಿರಿಚಾವಡಿ ಪುರಸ್ಕಾರ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹ ಸೇವಾ ಪ್ರಮುಖ್ ನಾ. ಸೀತಾರಾಮ್ ರವರು ಉದ್ಘಾಟಕರಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ, ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸದಸ್ಯರಾದ  ಧನಲಕ್ಷ್ಮಿ ಗಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

“ಸಿರಿಚಾವಡಿ ಪುರಸ್ಕಾರ”- ಗಂಗಾಧರ ಶೆಟ್ಟಿ ಅಳಕೆ, “ಸಿರಿಚಾವಡಿ ಯುವ ಸಾಧಕ ಪುರಸ್ಕಾರ”- ರೋಶನ್ ರೆನೋಲ್ಡ್, ಮಂಗಳೂರು, “ಸಿರಿಚಾವಡಿ ಬಾಲ ಪುರಸ್ಕಾರ”- ಬ್ರಾಹ್ಮೀ ಮಯ್ಯ, ಸುರತ್ಕಲ್, “ಸಿರಿಚಾವಡಿ ಮಾಧ್ಯಮ ಪುರಸ್ಕಾರ”- ಜಯಂತಿ ಎಸ್. ಬಂಗೇರ, ಮೂಡಬಿದಿರೆ ಮತ್ತು “ಸಿರಿಚಾವಡಿ ಸಂಘಟನಾ ಪುರಸ್ಕಾರ”-ವಿಜಯ ಯುವ ಸಂಗಮ (ರಿ) ಎಕ್ಕಾರು.

ಈ ಕಾರ್ಯಕ್ರಮಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು