ಮಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕಡಬದಲ್ಲಿ ಹಕ್ಕೊತ್ತಾಯ ಸಭೆ ನಡೆಯಿತು.
ಮುಖ್ಯ ಮಂತ್ರಿಗಳು ಹೇಳಿರುವಂತೆ ಮೇಲ್ಮನವಿ ಸಲ್ಲಿಕೆ ಅಲ್ಲ, ಮರು ತನಿಖೆ ಮಾಡಿಸಿ, ನೈಜ ಆರೋಪಿಗಳ ಬಂಧನವಾಗಲಿ ಎಂದು ಸಭೆಯಲ್ಲಿ ಆಗ್ರಹ ವ್ಯಕ್ತವಾಯಿತು. ಅತ್ಯಾಚಾರ ಮತ್ತು ಹತ್ಯೆ ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಒಕ್ಕಲಿಗ ಗೌಡ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದು, ಕಡಬ ಪೇಟೆಯಲ್ಲಿ ಸಾಗಿಬಂದ ಮೆರವಣಿಗೆ ಕಡಬ ತಹಸೀಲ್ದಾರ್ ಕಚೇರಿವರೆಗೆ ನಡೆಯಿತು. ಬಳಿಕ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು. ಅಲ್ಲದೆ ವಾಹನಗಳಿಗೆ ಜಸ್ಟಿಸ್ ಫಾರ್ ಸೌಜನ್ಯ ಸ್ಟಿಕ್ಕರ್ ಅಳವಡಿಕೆ ಮಾಡಲಾಯಿತು.