ಬಲಾಯಿಪಾದೆ: ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪೊಲೀಸ್ ಇಲಾಖೆ ದಿನೇ ದಿನೇ ಅಲರ್ಟ್ ಆಗುತ್ತಿದೆ. ಈಗಾಗಲೇ ಜಿಲ್ಲೆಯಾದ್ಯಂತ 17ಕ್ಕೂ ಅಧಿಕ ಚೆಕ್ ಪೋಸ್ಟ್ ಗಳನ್ನು ಆರಂಭಿಸಲಾಗಿದೆ.
ಈ ಮಧ್ಯೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಅವರ ನೇತೃತ್ವದಲ್ಲಿ ನಗರದ ಬಲಾಯಿಪಾದೆಯಲ್ಲಿ ಜಂಕ್ಷನ್ ನಲ್ಲಿ ದಿಢೀರ್ ಕಾರ್ಯಾಚರಣೆಗಳನ್ನು ನಡೆಸಲಾಯಿತು.
ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಒಳ ರಸ್ತೆಗಳಲ್ಲಿರುವ ಚೆಕ್ ಪೋಸ್ಟ್ ಗಳಿಗೆ ಸ್ವತಃ ಎಸ್ಪಿ ನೇತೃತ್ವದಲ್ಲಿ ಸರ್ಪೈಸ್ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ದಾಖಲೆ ಇಲ್ಲದ ಅನೇಕ ಸ್ವತ್ತುಗಳನ್ನು ಪರಿಶೀಲಿಸಲಾಗಿದೆ. ದಾಖಲೆ ಸಲ್ಲಿಸಲು ಕಾಲಾವಕಾಶವನ್ನು ಕೂಡ ನೀಡಲಾಗಿದೆ. ಎರಡನೇ ಬಾರಿಗೆ ಈ ದಿಢೀರ್ ಕಾರ್ಯಾಚರಣೆ ನಡೆಸುತ್ತಿರುವುದು ಅಕ್ರಮ ತಡೆಗಟ್ಟಲು ಮಹತ್ವದ ನಿರ್ಧಾರವಾಗಿದೆ.