ಮಂಗಳೂರು: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವತಿಯಿಂದ ಕ್ರೀಡಾ ಸ್ಪೂರ್ತಿ ಹಾಗೂ ವಿದ್ವತ್ ಸ್ಪೂರ್ತಿ 2023 ಮತ್ತು 24ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭವು ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್ನಲ್ಲಿ ನಡೆಯಿತು.
ಸಂತ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದ್ರು. ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ| ಆನಂದ್ಕೆ, ಯಶಸ್ಸು ಯಾವಾಲೂ ಅಂತಿಮವಲ್ಲ, ಅವಕಾಶ ತುಂಬಾ ಇದೆ. ಅದನ್ನು ಸದುಪಯೋಗ ಪಡೆಸಿಕೊಂಡು, ಸಾಧನೆ ಮಾಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ರೇ.ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಗೋಮ್ಸ್, ಕಲಿಕೆ ಎನ್ನುವುದು ಸ್ಪೂರ್ತಿ, ಅದಕ್ಕೆ ತಂತ್ರಜ್ಞಾನ ಮುಖ್ಯವಾಗಿ ಸೇರಿಸಿಕೊಂಡಿದೆ. ಇಂದು ನನ್ನ ದಿನ ಎನ್ನುವ ಪರಿಕಲ್ಪನೆಯೊಂದಿಗೆ ಮುಂದೆ ಸಾಗಿದಾಗ ಯಶಸ್ಸು ಸಿಗಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ರೆಕ್ಟರ್ ರೇ.ಫಾದರ್ ಮೆಲ್ವಿನ್ ಜೆ.ಪಿಂಟೋ, ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರತಿಭಾವಂತಹ ಸ್ಪೂರ್ತಿದಾಯಕವಾಗಿರಬೇಕು. ಆ ಮೂಲಕ ಮತ್ತೊಬ್ಬರಿಗೆ ಮಾರ್ಗದರ್ಶನವಾಗಬೇಕೆಂದರು. ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ರೇ.ಡಾ.ಪ್ರವೀಣ್ ಮಾರ್ಟಿಸ್, ರಿಜಿಸ್ಟರ್ ಡಾ| ಆಲ್ವಿನ್ ಡೇಸಾ, ಹಣಕಾಸು ಅಧಿಕಾರಿ ಫಾದರ್ ವಿನ್ಸೆಂಟ್ ಪಿಂಟೋ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.