ಬಂಟ್ವಾಳ: ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರಗಳನ್ನು ನೀಡುವ ಕಾರ್ಯವಾಗಬೇಕಾಗಿದೆ. ಆಧ್ಯಾತ್ಮಿಕ ಬದುಕಿನಿಂದ ರಾಗದ್ವೇಷಗಳು ನಿವಾರಣೆಕಾಗಿದೆ. ವಿಜ್ಞಾನದ ವೇಗದ ಜತೆಗೆ ಅಧ್ಯಾತ್ಮವೂ ಸೇರಿಕೊಂಡಾಗ ಉತ್ತಮವಾಗಿ ಸಮಾಜ ಮುನ್ನಡೆಯುತ್ತದೆ. ತಾಳ್ಮೆ ಸಹನೆಯ ಕೊರತೆ ಸಮಾಜದಲ್ಲಿ ಎದ್ದು ಕಾಣುತ್ತಿದ್ದು, ಇದನ್ನು ಸರಿದೂಗಿಸುವ ಅನಿವಾರ್ಯತೆಯಿದೆ. ಆಧ್ಯಾತ್ಮಿಕ ಬದುಕಿನಿಂದ ರಾಗದ್ವೇಷಗಳು ನಿವಾರಣೆ ಮಾಡಬಹುದು ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಭಾನುವಾರ ಒಡಿಯೂರು ಕ್ಷೇತ್ರದ ಬನಾರಿಯ ಗದ್ದೆಯಲ್ಲಿ ಶ್ರೀಗಳವರ ಜನ್ಮದಿನೋತ್ಸವ ಸಮಿತಿಯ ವತಿಯಿಂದ ಜನ್ಮದಿನೋತ್ಸವ – ಗ್ರಾಮೋತ್ಸವದ ಅಂಗವಾಗಿ ನಡೆದ ಕೆಸರ್ ದ ಕಂಡೊಡೊಂಜಿ ದಿನವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ತೀರ್ಪುಗಾರರಾಗಿ ಚಂದ್ರಹಾಸ ಶೆಟ್ಟಿ, ರವೀಂದ್ರ ಅಳಿಕೆ, ಶಶಿಧರ ಶೆಟ್ಟಿ ಜಮ್ಮದಮನೆ, ಬಿಂದುಶ್ರೀ, ಪ್ರವೀಣ್ ಅವರು ಸಹಕರಿಸಿದರು. ಸಾಧ್ವಿ ಮಾತಾನಂದಮಯೀ ದಿವ್ಯ ಸಾನಿಧ್ಯ ವಹಿಸಿದ್ದರು.
ಸಮಿತಿಯ ಕಾರ್ಯಾಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎ. ಸುರೇಶ್ ರೈ, ನಿರ್ದೇಶಕ ಲೋಕನಾಥ ಶೆಟ್ಟಿ ತಾಳಿಪ್ಪಾಡಿಗುತ್ತು, ಒಡಿಯೂರು ಗುರುದೇವ ಸೇವಾಬಳಗದ ಅಧ್ಯಕ್ಷ ಅಶೋಕ್ ಕುಮಾರ್ ಬಿಜೈ, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಯೋಜನಾಧಿಕಾರಿ ಕಿರಣ್ ಉರ್ವ, ವಿದ್ಯಾಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ, ಕನ್ಯಾನ ಗ್ರಾಮ ಸಮಿತಿ ಅಧ್ಯಕ್ಷ ಕೆ. ಪಿ. ರಘುರಾಮ ಶೆಟ್ಟಿ, ರೇಣುಕಾ ಎಸ್. ರೈ, ಕ್ರೀಡಾಕೂಟದ ಸಂಚಾಲಕ ಮಾತೇಶ್ ಭಂಡಾರಿ ಉಪಸ್ಥಿತರಿದ್ದರು.
ಲಿಂಗಪ್ಪ ಗೌಡ ಪನೆಯಡ್ಕ ಸ್ವಾಗತಿಸಿದರು. ಸದಾಶಿವ ಶೆಟ್ಟಿ ವಂದಿಸಿದರು. ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.