ಬೆಳ್ತಂಗಡಿ: ವೇಣೂರು ಸನಿಹದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿವೆ. ಅದನ್ನು ವೀಕ್ಷಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರು ಮಂಗಳವಾರ ಆಗಮಿಸಿದ್ದರು. ಗರ್ಭಗುಡಿ ಹಾಗೂ ತೀರ್ಥ ಮಂಟಪದ ನವೀಕರಣದ ಕಾಮಗಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್, ಕಾರ್ಯಾಧ್ಯಕ್ಷ ಮೀಯಂದೂರು ಮಹೇಶ್, ಭಟ್, ಗ್ರಾ.ಪಂ.ಸದಸ್ಯ ಜಿನ್ನು, ಜಗದೀಶ ನಾಯಕ್ ಸುಲ್ಕೇರಿ ಶ್ರೀರಾಮ ಶಾಲೆಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ರಾಜು ಪೂಜಾರಿ, ಗಿರಿಜಮ್ಮ ಇದ್ದರು.