ಮಂಗಳೂರು: ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. ಕಳೆದ ಎರಡು ದಿನಗಳ ಹಿಂದಷ್ಟೇ 2018, 2019 ಮತ್ತು 2020ರ ಬ್ಯಾಚ್ನ ಹತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿತ್ತು. ಈಗ ಮತ್ತೆ ರಾಜ್ಯದ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಸ್ಥಳ ಕೂಡ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ.
ಅಲ್ಲದೆ ಖಡಕ್ ಆಫಿಸರ್ ಎಂದು ಹೆಸರುವಾಸಿಯಾಗಿದ್ದ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ದೀಪ್ ಕುಮಾರ್ ಜೈನ್ ಕೂಡ ವರ್ಗಾವಣೆಗೊಂಡಿದ್ದು ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ.