ಉಜಿರೆ: ಸಾಹಿತ್ಯವೆಂಬುದು ಭಾವನೆಗಳ ಸ್ಪುರಣೆ ಎಂದು ಪ್ರಾಧ್ಯಾ ಪಕ ವಿನಯ್ ಏನ್ ಎಸ್ ಹೇಳಿದರು.
ಉಜಿರೆಯ ಶ್ರೀ.ಧ.ಮ ಕಾಲೇಜಿನಲ್ಲಿ ಆಂಗ್ಲ ಮಾಧ್ಯಮ ವಿಭಾಗವು ಏರ್ಪಡಿಸಿದ್ದ ಅಧ್ಯಯನ ವಿನಿಮಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಣದಲ್ಲಿ ಸೃಜನಶೀಲತೆ ಮತ್ತು ಕ್ರಿಯಾತ್ಮಕತೆ ಮುಖ್ಯ ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ಆಂಗ್ಲ ವಿಭಾಗವು ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಸಹ ಶಿಕ್ಷಣದಲ್ಲಿ ತೊಡಗಿಕೊಳ್ಳಲು ವಿಫುಲ ಅವಕಾಶಗಳನ್ನು ನೀಡಿದೆ. ಶೈಕ್ಷಣಿಕ ವಡಂಬಡಿಕೆಯಿಂದ ಸಮೀಪ ಕಾಲೇಜುಗಳನ್ನು ಒಳಗೊಂಡು ವಿಸ್ಕ್ರತವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿವೆಕಾನಂದ ಕಾಲೇಜ್ ಪುತ್ತೂರು , ಕೆ.ಎಸ್.ಎಸ್ ಕಾಲೇಜ್ ಸುಬ್ರಹ್ಮಣ್ಯ , ಎಸ್.ವಿ.ಎಸ್ ಕಾಲೇಜ್ ಬಂಟ್ವಾಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹದಿನೈದಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಂಶೋಧನಾ ಪತ್ರಗಳನ್ನು ಮಂಡಿಸಿದರು. ಹಾಗೂ ಇಂಗ್ಲಿಷ್ ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.
ಈ ಕಾರ್ಯಕ್ರಮದಲ್ಲಿ ಆಂಗ್ಲ ವಿಭಾಗದ ಮುಖ್ಯಸ್ಥ ಜಿ.ಆರ್ ಭಟ್, ವಿಭಾಗದ ಸಹಪ್ರಾದ್ಯಾಪಕರು ಹಾಗೂ ಪ್ರೊಫೆಸರ್ ಗೋವಿಂದ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಖುಷಿ ಕುಮಾರ್, ಮೌಲ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಮಯೂರಿ ವಂದಿಸಿದರು.