ಸುಬ್ರಹ್ಮಣ್ಯ: ಲೋಕಸಭೆಯ ಕಲಾಪದಲ್ಲಿ ಆಗುವ ಚರ್ಚೆಗಳನ್ನು ಆಂಗ್ಲ ಹಾಗೂ ಪ್ರಾದೇಶಿಕ ಭಾಷೆಗೆ ಭಾಷಾಂತರ ಮಾಡುವ ಕನ್ಸಲ್ಟಂಟ್ ಇಂಟಪ್ರಿಟರ್ ಹುದ್ದೆಗೆ ಸುಬ್ರಹ್ಮಣ್ಯ ಸಮೀಪದ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಗುಂಡಿಹಿತ್ಲುವಿನ ಡಾ| ಗೋವಿಂದ ಎನ್ . ಎಸ್. ನೇಮಕಗೊಂಡಿದ್ದಾರೆ.
ಲೋಕಸಭೆಯ ಆಧೀವೇಶನದಲ್ಲಿನ ಕಾರ್ಯಕಲಾಪಗಳನ್ನು ಭಾರತೀಯ ವ್ಯವಸ್ಥೆಗೆ ಭಾಷಾಂತರಿಸುವ ಸಲುವಾಗಿ ಹೊಸ ಸಂಸತ್ ಭವನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕಾಗಿ ಎಂಟನೇ ಪರಿಚ್ಛೇದಕ್ಕೆ ಸೇರ್ಪೆಡೆಯಾಗಿರುವ ಎಲ್ಲಾ ಭಾಷೆಗಳಲ್ಲೂ ತಲಾ 5 ಕನ್ಸಲ್ಟಂಟ್ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಕನ್ನಡಕ್ಕೆ ಭಾಷಾಂತರ ಹುದ್ದಗೆ 15 ಮಂದಿ ಅರ್ಜಿ ಸಲ್ಲಿಸಿದ್ದು, 13 ಮಂದಿಯನ್ನು ಆಯ್ಕೆ ಮಾಡಲಾಗಿತ್ತು, ನಾಲ್ವರು ನೇಮಕಗೊಂಡಿದ್ದಾರೆ. ಅವರಲ್ಲಿ ಮೂವರು ದಿಲ್ಲಿಯ ಕನ್ನಡಿಗರಾಗಿದ್ದು, ಗೋವಿಂದ ಎನ್. ಎಸ್ ಕರ್ನಾಟಕ (ದಕ್ಷಿಣ ಕನ್ನಡ)ದವರಾಗಿದ್ದಾರೆ. ಈ ಮೊದಲೇ ಓರ್ವರು ಪೂರ್ಣಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದರು.