News Karnataka Kannada
Monday, April 29 2024
ಮಂಗಳೂರು

ಸುಬ್ರಹ್ಮಣ್ಯ: ಕೆ. ಎಸ್.ಎಸ್. ಕಾಲೇಜಿನಲ್ಲಿ ಹಲಸು ಮೇಳ

K. Jackfruit Mela, Exhibition at S.S. College
Photo Credit : News Kannada

ಸುಬ್ರಹ್ಮಣ್ಯ: ಎಸ್.ಎಸ್. ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ ಇದರ ಆಶ್ರಯದಲ್ಲಿ ಜೂನ್ 30 ರಂದು ಹಲಸು ಮೇಳ-2023 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ಮಂಕುಡೆ ವೆಂಕಟರಮಣ ರಾವ್ ನೆರವೇರಿಸಿದರು. ಮುಖ್ಯ ಅಭ್ಯಾಗತರಾಗಿ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ.ನಿಂಗಯ್ಯ ಭಾಗವಹಿಸಿದ್ದರು.

ವಿದ್ಯಾರ್ಥಿಗಳೇ ತಯಾರಿಸಿದ ಹೊಸ ರೀತಿಯ ಸ್ವಾದಿಷ್ಟವಾದ ಹಲಸಿನ ಖಾದ್ಯಗಳ ಪ್ರದರ್ಶನ ಮತ್ತು ಮಾರಾಟ ಮನಸ್ಸೆಳೆಯುತ್ತಿತ್ತು. ವಿವಿಧ ತಳಿಯ ಹಲಸಿನ ಹಣ್ಣುಗಳ ಮತ್ತು ವಿವಿಧ ಹಲಸು ತಳಿಗಳ ಸಸ್ಯ ಪ್ರದರ್ಶನ ಮತ್ತು ಮಾರಾಟ ಎಲ್ಲರ ಗಮನ ಸೆಳೆಯುತ್ತಿತ್ತು.

ಈ ಸಂದರ್ಭದಲ್ಲಿ ಕೆ.ಎಸ್.ಎಸ್. ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಪಿ.ಟಿ, ಕಾಲೇಜಿನ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಬೇರೆ ಬೇರೆ ಶಾಲೆಗಳ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಮೇಳದಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು