Categories: ಮಂಗಳೂರು

ಸುಬ್ರಹ್ಮಣ್ಯ: ಬೆತ್ತಲೆ ಓಡಾಡಿ, ರಾತ್ರಿ ವೇಳೆ ಮನೆಗಳ ಡೋರ್‌ ಬಡಿಯುತ್ತಿದ್ದ ವ್ಯಕ್ತಿ ರಕ್ಷಣೆ

ಸುಬ್ರಹ್ಮಣ್ಯ: ಎರಡ್ಮೂರು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ, ಗುತ್ತಿಗಾರು, ಪೇಟೆಯಲ್ಲಿ ಬೆತ್ತಲೆ ಓಡಾಡುತ್ತ, ರಾತ್ರಿ ಮನೆಗಳ ಡೋರ್ ಬಡಿಯುತ್ತ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ತೋರಿದ ಕೊಪ್ಪಳ ಮೂಲದ ಮಹೇಶ್ ಎಂಬ ವ್ಯಕ್ತಿಯನ್ನು ಅಮರ ಚಾರಿಟೇಬಲ್ ಟ್ರಸ್ಟ್ ವತಿಯ ಮನವಿಗೆ ಮೇರೆಗೆ ಸುಬ್ರಹ್ಮಣ್ಯ ಠಾಣಾಧಿಕಾರಿ ಮಂಜುನಾಥ್ ಮತ್ತು ದೇವಿಪ್ರಸಾದ್ ಚಿಕ್ಮುಳಿ ಸ್ಪಂದಸಿ ಊರಿಗೆ ಕಳುಹಿಸಿದ ಘಟನೆ ವರದಿಯಾಗಿದೆ.

ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಪೇಟೆಯಲ್ಲಿ ಬೆತ್ತಲೆ ಓಡಾಡುತಿದ್ದ ವ್ಯಕ್ತಿ ನಂತರ ಗುತ್ತಿಗಾರು ಪೇಟೆಗೆ ಆಗಮಿಸಿ ಬೆತ್ತಲೆ ಓಡಾಡುತಿದ್ದರು. ಈ ಸಂದರ್ಭದಲ್ಲಿ ಅವರನ್ನು ಜೀಪ್ ಚಾಲಕರದ, ವಿನಯ್ ಮಾಡಬಾಕಿಲು, ಕುಶಾಲಪ್ಪ ಕುಳ್ಳಾಜೆ, ಜಗದೀಶ್ ಕಾರ್ಜ, ನೀಲಪ್ಪ ಗೌಡ ಪೈಕ, ವೆಂಕಟ್  ಮನವೊಲಿಸಿ ಮಾಹಿತಿ ಕಲೆ ಹಾಕಿದ್ದರು.. ಅದೇ ದಿನ ಸಂಜೆ ಆ ವ್ಯಕ್ತಿ ಮತ್ತೆ ಸ್ಥಳೀಯ ಮನೆಗಳ ಬಾಗಿಲು ಬಡಿದು ಕೀಟಲೆ ಮಾಡಿದ್ದು ತಿಳಿದು ಬಂದಿತ್ತು. ಮರುದಿನ ಆ ವ್ಯಕ್ತಿಯನ್ನು ಅಮರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚಂದ್ರಶೇಖರ ಕಡೋಡಿ ಅವರು ಹೆಚ್ಚಿನ ಮಾಹಿತಿ ಕಲೆ ಹಾಕಿ ಎಸ್ ಐ ಅವರ ಸಹಾಯ ಪಡೆದು ಅವರ ಊರಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂದರ್ಭದಲ್ಲಿ ವ್ಯಕ್ತಿ ಗೆ ಸಂಪೂರ್ಣ ಹೊಸ ಬಟ್ಟೆಯನ್ನು ಸುಬ್ರಹ್ಮಣ್ಯ ಠಾಣಾಧಿಕಾರಿ ನೀಡಿದರೆ, ಗುತ್ತಿಗಾರಿನ ಉದ್ಯಮಿ ದೇವಿಪ್ರಸಾದ್ ಚಿಕ್ಮಳಿ ಅವರ ವ್ಯಕ್ತಿ ಊರಿಗೆ ತಲುಪಲು ವಾಹನದ ವ್ಯವಸ್ಥೆ ಮಾಡಿದರು. ವಾಹನ ಚಾಲಕರಾಗಿ ರವೀಂದ್ರ ಪೈಕ ಸಹಕರಿಸಿದ್ದರು. ಟ್ರಸ್ಟ್ ಮತ್ತು ಚಂದ್ರಶೇಖರ ಕಡೋಡಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

Ashika S

Recent Posts

ಚಲಿಸುತ್ತಿರುವ ರೈಲಿನಲ್ಲಿಯೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ…

5 mins ago

ಮತ್ತೆ ಮಳೆಯ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ, ವಿಮಾನ ಹಾರಾಟ ಬಂದ್

ಎಪ್ರಿಲ್ ತಿಂಗಳಲ್ಲಿ ಮಳೆಯ ಆರ್ಭಟಕ್ಕೆ ನಲುಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತೆ ಮಳೆ ಪ್ರಾರಂಭವಾಗಿದೆ. ಮರಳುಗಾಡು ದುಬೈ ಮಳೆಯಿಂದಾಗಿ ತತ್ತರಿಸಿ…

24 mins ago

ಯುವಕನಿಗೆ ಲೈಂಗಿಕ ಕಿರುಕುಳ: ವಾಸ್ತು ತಜ್ಞನ ಬಂಧನ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

35 mins ago

ʼತಡರಾತ್ರಿ ತಾಯಿ ಕಾಣೆʼ; ರೇವಣ್ಣನ ವಿರುದ್ಧ ಯವಕನಿಂದ ದೂರು ದಾಖಲು

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗಿವೆ. ಇದೀಗ ಅವರ ವಿರುದ್ಧ…

42 mins ago

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.…

54 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು !

ಈಗಾಗಲೇ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣಗೆ…

1 hour ago