ಪುತ್ತೂರು: ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರಾ (30) ಆಯತಪ್ಪಿ ಮರದ ಮೇಲಿಂದ ಬಿದ್ದು, ಮೃತಪಟ್ಟ ಘಟನೆ ಕಡಬ ತಾಲೂಕು ಸವಣೂರು ಸಮೀಪದ ಪುಣ್ಚಪ್ಪಾಡಿಯಲ್ಲಿ ನಡೆದಿದೆ.
ಮಹಿಳೆಯಾಗಿ ತೆಂಗಿನ ಮರ ಹತ್ತುವ ಕಾಯಕದಲ್ಲಿ ತೊಡಗಿ ಹೆಸರುವಾಸಿಯಾಗಿದ್ದ ಸುಚಿತ್ರಾ ಕಾಯಿ ಕೀಳುವ ವೇಳೆಯೇ ಮರದಿಂದ ಬಿದ್ದು ಮೃತಪಟ್ಟಿದ್ದಾರೆ. ಸುಚಿತ್ರ ಅವರ ಕಾಯಿ ಕೀಳುವ ಧೈರ್ಯದ ಕಾರ್ಯಕ್ಕೆ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.