ಸುಳ್ಯ: ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಕೆ.ಅಣ್ಣಾಮಲೈ ಸುಳ್ಯಕ್ಕೆ ಭೇಟಿ ನೀಡಿದ ವೇಳೆ ಹಣ ಸಾಗಾಟದ ಆರೋಪದಡಿ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಚುನಾವಣೆ ಉಸ್ತುವಾರಿಯಾಗಿರುವ ಅಣ್ಣಾಮಲೈ ಕರಾವಳಿ ಪ್ರವಾಸದಲ್ಲಿದ್ದು, ಮಾ.18ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗಿರಥಿ ಮುರುಳ್ಯ ಅವರ ಪರ ನಾಮಪತ್ರ ಸಲ್ಲಿಸಲು ಸುಳ್ಯಕ್ಕೆ ಆಗಮಿಸಿದ್ದರು.
ಈ ನಡುವೆ ಕಾಂಗ್ರೆಸ್ ಅಣ್ಣಾಮಲೈ ಹೆಲಿಕಾಪ್ಟರ್ ಮೂಲಕ ಹಣ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನಲೆ ಸುಳ್ಯಕ್ಕೆ ಆಗಮಿಸಿದ್ದ ಅಣ್ಣಾಮಲೈ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು.